Advertisement

Ariyalur ತಮಿಳುನಾಡಿನಲ್ಲಿ ಪಟಾಕಿ ದುರಂತ: 9 ಸಾವು

10:14 PM Oct 09, 2023 | Shreeram Nayak |

ಅರಿಯಲೂರು: ತಮಿಳುನಾಡಿನ ಅರಿಯಲೂರಿನಲ್ಲಿ ಪಟಾಕಿ ಉತ್ಪಾದನೆ ಘಟಕದಲ್ಲಿ ಸೋಮವಾರ ಬೆಂಕಿ ಆಕಸ್ಮಿಕ ಸಂಭವಿಸಿ 9 ಮಂದಿ ಅಸುನೀಗಿದ್ದಾರೆ.

Advertisement

ಐವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ತಂಜಾವೂರಿನ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆರೆಯ ಕರ್ನಾಟಕದ ಅತ್ತಿಬೆಲೆಯ ಪಟಾಕಿ ಗೋದಾಮು ಸ್ಫೋಟದಿಂದ ತಮಿಳುನಾಡಿನ 14 ಮಂದಿ ಕೊನೆಯುಸಿರೆಳೆದ ದಾರುಣ ಘಟನೆಯ ಕಹಿ ನೆನಪಿನ ನಡುವೆ ಮತ್ತೊಂದು ದುರಂತ ಘಟಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಸುನೀಗಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ, ತೀವ್ರವಾಗಿ ಗಾಯಗೊಂಡವರಿಗೆ 1 ಲಕ್ಷ ರೂ., ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next