Advertisement

94 ಸಿಸಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಸಂಭವ: ಸಚಿವ ಆರ್‌. ಅಶೋಕ್‌

10:31 PM Feb 20, 2023 | Team Udayavani |

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ 94 ಸಿಸಿ ಅಡಿ ಅರ್ಜಿ ಸಲ್ಲಿಸಿ ಸಕ್ರಮ ಮಾಡಿಕೊಳ್ಳಲು ಮತ್ತೂಮ್ಮೆ ಅವಕಾಶ ಕೊಡುವ ಉದ್ದೇಶವಿದೆ ಎಂಬ ಸಂಗತಿಯನ್ನು ಕಂದಾಯ ಸಚಿವ ಆರ್‌. ಅಶೋಕ್‌ ಸೂಚ್ಯವಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

Advertisement

ಶಾಸಕ ಸೋಮಶೇಖರ್‌ ರೆಡ್ಡಿ ಪ್ರಶ್ನೆಗೆ ಉತ್ತರಿಸಿ, ಹೊಸದಾಗಿ ಅರ್ಜಿ ಹಾಕಲು ಅವಕಾಶ ನೀಡಿದ್ದು, ದಿನಾಂಕ ವಿಸ್ತರಣೆ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

94ಸಿಸಿ ಅಡಿ ಅರ್ಜಿಯನ್ನು ತಿಸ್ಕರಿಸಿರುವ ಬಗ್ಗೆ ಸೋಮಶೇಖರ್‌ ರೆಡ್ಡಿ ಗಮನ ಸೆಳೆದು, ಈ ಸಮಸ್ಯೆ ಪರಿಹಾರಕ್ಕೆ ತತ್‌ಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next