Advertisement

ಬರ ಪರಿಹಾರಕ್ಕೆ 949.49 ಕೋಟಿ

12:30 AM Jan 30, 2019 | Team Udayavani |

ನವದೆಹಲಿ/ಬೆಂಗಳೂರು: ಕರ್ನಾಟಕದ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ 949.49 ಕೋಟಿ ರೂ. ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಒಟ್ಟು ಏಳು ರಾಜ್ಯಗಳ ಬರ, ಪ್ರವಾಹ ಸೇರಿದಂತೆ ನೈಸರ್ಗಿಕ ವಿಕೋಪಗಳ ಪರಿಹಾರವಾಗಿ 7,214 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕಕ್ಕೆ 949 ಕೋಟಿ ರೂ. ಸಿಗಲಿದೆ. ಆದರೆ, ಕೇಂದ್ರ ಸರ್ಕಾರ 949 ಕೋಟಿ ರೂ. ಕೊಟ್ಟಿರುವುದು ರಾಜ್ಯಕ್ಕೆ ಸಮಾಧಾನ ತಂದಿಲ್ಲ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಬರದಿಂದ 16,600 ಕೋಟಿ ರೂ. ನಷ್ಟವಾಗಿದೆ. ಕೇಂದ್ರದ ಮಾನದಂಡದ ಪ್ರಕಾರವೇ 2,344 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆವು. ಆದರೆ, 949.90 ಕೋಟಿ ರೂ. ಮಾತ್ರ ನೀಡಲಾಗಿದೆ. ಕೇಂದ್ರ ಸರ್ಕಾರ ಇನ್ನೂ ಹೆಚ್ಚಿನ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next