Advertisement

ಸನ್ನಡತೆ: 96 ಕೈದಿಗಳ ಅವಧಿಪೂರ್ವ ಬಿಡುಗಡೆ

09:45 PM May 26, 2022 | Team Udayavani |

ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 96 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಗುರುವಾರ ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ.

Advertisement

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 45 ಮಂದಿ   ಹಾಗೂ ರಾಜ್ಯದ ಇತರ ಜೈಲುಗಳಲ್ಲಿದ್ದ  51 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಗೊಂಡವರು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಜೈಲಿನಲ್ಲಿ ಅವರ ಪರಿವರ್ತನೆ ಹಾಗೂ ಬದಲಾವಣೆ ಕಂಡು  ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಕೆಲವು ತಿಂಗಳ ಹಿಂದೆ ಸನ್ನಡತೆ ಆಧಾರದ ಮೇಲೆ ಸುಮಾರು 120ಕ್ಕೂ ಅಧಿಕ ಮಂದಿಗಳ ಹೆಸರನ್ನು ಉಲ್ಲೇಖೀಸಿ ಬಿಡುಗಡೆಗೆ ಕಾರಾಗೃಹ ಇಲಾಖೆಗೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಈ ಪೈಕಿ 24 ಮಂದಿ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿದ್ದರಿಂದ ಬಿಡುಗಡೆಗೆ ಸರಕಾರ ಹಾಗೂ ರಾಜ್ಯಪಾಲರು ನಿರಾಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next