Advertisement

Oct. 12: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಾಸರಗೋಡಿಗೆ

11:01 PM Oct 07, 2023 | Team Udayavani |

ಕಾಸರಗೋಡು: ಕೇಂದ್ರ ಭೂ ಸಾರಿಗೆ-ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಖಾತೆ ಸಚಿವ ನಿತಿನ್‌ ಗಡ್ಕರಿ ಅ. 12ರಂದು ಬೆಳಗ್ಗೆ ಕಾಸರಗೋಡಿಗೆ ಆಗಮಿಸಿ ತಾಳಿಪಡ್ಪು ಮೈದಾನದಲ್ಲಿ ನಡೆಯುವ ಬೃಹತ್‌ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರ ಕೇರಳದಲ್ಲಿ ಜಾರಿಗೊಳಿಸಲು ತೀರ್ಮಾನಿಸಿರುವ ಅಭಿವೃದ್ಧಿ ಯೋಜನೆಗಳನ್ನು ಘೋಷಿಸುವರು.

Advertisement

ಕಾಸರಗೋಡು ಜಿಲ್ಲೆಯಲ್ಲಿ ಎರಡು ಬೃಹತ್‌ ಅಭಿವೃದ್ಧಿ ಯೋಜನೆಗಳ ಜಾರಿಗೆ ಕೇಂದ್ರ ಸರಕಾರ ತೀರ್ಮಾನಿಸಿದ್ದು, ಅದರ ಘೋಷಣೆಯನ್ನು ಸಚಿವರು ಇದೇ ಕಾರ್ಯಕ್ರಮದಲ್ಲಿ ಮಾಡುವರು. ಆದರೆ ಈ ಎರಡು ಅಭಿವೃದ್ಧಿ ಯೋಜನೆಗಳು ಯಾವುದೆಂಬುದನ್ನು ಈ ತನಕ ಬಹಿರಂಗಪಡಿಸಿಲ್ಲ. ಅಂದಿನ ಕಾರ್ಯಕ್ರಮದಲ್ಲೇ ಪ್ರಕಟಿಸಲಾಗುವುದು.

ಕಾಸರಗೋಡಿನ ಕಾರ್ಯಕ್ರಮದ ಬಳಿಕ ಕೇಂದ್ರ ಸಚಿವರು ಮೂನಾರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

 

Advertisement

Udayavani is now on Telegram. Click here to join our channel and stay updated with the latest news.

Next