Advertisement

ವಿದ್ಯುತ್‌ ತಂತಿ ತುಳಿದು 12 ವರ್ಷದ ಬಾಲಕ ಸಾವು

05:36 PM Nov 02, 2021 | Team Udayavani |

ಬೆಂಗಳೂರು: ವಿದ್ಯುತ್‌ ತಂತಿ ತಗುಲಿ 12 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವಿದ್ಯಾರಣ್ಯಪುರದ ರಾಮಚಂದ್ರಪುರ ಮೈದಾನದಲ್ಲಿ ಸೋಮವಾರ ನಡೆದಿದೆ. ಇನ್ನು ಘಟನೆ ಸಂಬಂಧ ಸ್ಥಳೀಯರು ಬೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿದರು. ವಿದ್ಯಾರಣ್ಯಪುರದ ನಿವಾಸಿ ಗೌತಮ್‌ (12) ಮೃತ ಬಾಲಕ.

Advertisement

ರಾಮಚಂದ್ರ ಪುರ ಆಟದ ಮೈದಾನದಲ್ಲಿ ಸೋಮವಾರ ಮಧ್ಯಾಹ್ನ 4.30ರಲ್ಲಿ ಗೌತಮ್‌ ಸ್ನೇಹಿತರ ಜತೆಗೆ ಕ್ರಿಕೆಟ್‌ ಆಟವಾಡುತ್ತಿದ್ದ. ಮೈದಾನದ ಬದಿಯಲ್ಲಿರುವ ಟ್ರಾನ್ಸ್‌ ಫಾರ್ಮರ್‌ ಸಮೀಪ ಬಿದ್ದಿದ್ದ ಬಾಲ್‌ ತರಲು ಓಡಿಹೋಗಿದ್ದ. ಆ ವೇಳೆ ಮೈದಾನದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದಾಗ ಗೌತಮ್‌ಗೆ ವಿದ್ಯುತ್‌ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ:- ತಾಂತ್ರಿಕ ದೋಷ:‌ ವಿಮಾನ ತುರ್ತು ಭೂ-ಸ್ಪರ್ಶ

ವಿಚಾರ ತಿಳಿದು ವಿದ್ಯಾರಣ್ಯಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬೆಸ್ಕಾಂ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ವಿದ್ಯುತ್‌ ತಂತಿ ಮೈದಾನಕ್ಕೆ ಬಿದ್ದಿರುವ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇಲಾಖೆ ನಿರ್ಲಕ್ಷ್ಯವಹಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ, ಬೆಸ್ಕಾಂ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಸ್ಥಳೀಯರು ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next