Advertisement

ಬಿಜೆಪಿಗೆ ಇಂದು ಮಾಲಕರಡ್ಡಿ

12:30 AM Mar 22, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆ ಬಿಸಿ ಕಾವು ಏರುತ್ತಿದ್ದಂತೆ ನಾಯಕರ ಪಕ್ಷಾಂತರ ಪರ್ವವೂ ಮುಂದುವರಿದಿದೆ. ಹೈದರಾಬಾದ್‌ ಕರ್ನಾಟಕದ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಾ| ಎ.ಬಿ.ಮಾಲಕರಡ್ಡಿ ಅವರು ಕಾಂಗ್ರೆಸ್‌ ತೊರೆದು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಅವರು “ಕಮಲ’ ಹಿಡಿಯಲಿದ್ದಾರೆ. ಯಡಿಯೂರಪ್ಪ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿದ ಮಾಲಕರಡ್ಡಿ, ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಜತೆಗೆ ರಾಜ್ಯ ಮೈತ್ರಿ ಸರಕಾರದ ಆಡಳಿತದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next