Advertisement

Tragic: ತೋಟಬೆಂಗ್ರೆ; ಸಮುದ್ರಕ್ಕೆ ಬಿದ್ದು ಬಾಲಕ ಸಾವು

08:27 PM Mar 21, 2024 | Team Udayavani |

ಪಣಂಬೂರು: ತಂದೆಯೊಂದಿಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಗುರುವಾರ ಸಂಜೆ ಮೃತಪಟ್ಟಿದ್ದಾನೆ.

Advertisement

ತೋಟಬೆಂಗ್ರೆ ಮಿಥುನ್‌ ಎಂಬವರ ಪುತ್ರ ಪ್ರಜೀತ್‌ (15) ಮೃತ ಬಾಲಕ. ದೋಣಿಯಲ್ಲಿ ತೆರಳುತ್ತಿದ್ದಾಗ ಬಾಲಕ ನೀರಿಗೆ ಬಿದ್ದಿದ್ದಾನೆ. ಮೀನುಗಾರರು ರಕ್ಷಣೆಗಾಗಿ ತತ್‌ಕ್ಷಣ ಕಾರ್ಯಾಚರಣೆ ನಡೆಸಿದರೂ ತೆರೆಗಳ ನಡುವೆ ಸಿಲುಕಿದ ಆತನನ್ನು ಪತ್ತೆ ಮಾಡುವಾಗ ಒಂದು ತಾಸು ವಿಳಂಬವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದ. ಈ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next