Advertisement

ಅಡ್ಡಾದಿಡ್ಡಿ ನುಗ್ಗಿದ ಕಾರಿಗೆ ಬಾಲಕ ಬಲಿ 

12:05 PM May 28, 2017 | |

ಕೆ.ಆರ್‌.ಪುರ: ಅಡ್ಡಾದಿಡ್ಡಿಯಾಗಿ ನುಗ್ಗಿದ ಕಾರಿಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯ ಬಾಬುಸಾಬ್‌ಪಾಳ್ಯದಲ್ಲಿ ಶನಿವಾರ ರಾತ್ರಿ ನಡೆದಿದೆ. ಹನುಮಂತನಗರದ ವರುಣ್‌ ಮೃತ ಬಾಲಕ.

Advertisement

ಬಾಬುಸಾಪಾಳ್ಯದ ಶಕ್ತಿಗಣಪತಿ ದೇವಾಲಯದ ಬಳಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಸಿದ್ದಾನೆ. ಹೀಗಾಗಿ ಸರಣಿ ಅಪಘಾತ ಸಂಭವಿಸಿದೆ. ಹಲವು ಜನರ ಮೇಲೆ ಕಾರು ಹತ್ತಿದೆ. ಘಟನೆಯಲ್ಲಿ ಓರ್ವ ಬಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಹೇಮಂತ್‌ ಎಂಬ ಬಾಲಕನ ಸ್ಥಿತಿ ಗಂಬೀರವಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಇನ್ನುಳಿದಂತೆ ನಾಲ್ವರಿಗೆ ಸಣ್ಣಪ್ರಮಾಣದ ಗಾಯಗಳಾಗಿವೆ. ಒಂದು ದ್ವಿಚಕ್ರವಾಹನಕ್ಕೆ ಹಾನಿಯಾಗಿದೆ. ಅಪಘಾತವಾದ ನಂತರ ಕಾರಿನಲ್ಲಿದ್ದವರೆಲ್ಲ ಪರಾರಿಯಾಗಿದ್ದಾರೆ. ಈ ಸಂಬಂಧ ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವನನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next