Advertisement

ಕೈ ನಿರ್ದೇಶಕರನ್ನೇ ಹೈಜಾಕ್ ಮಾಡಿದ ರೇವಣ್ಣ

11:09 PM Jul 27, 2019 | sudhir |

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ನಡುವೆ ಫೈಟ್‌ ಆರಂಭವಾಗಿದ್ದು, ಕಾಂಗ್ರೆಸ್‌ಗೆ ಸೇರಿದ ನಾಲ್ವರು ನಿರ್ದೇಶಕರನ್ನು ಜೆಡಿಎಸ್‌ ನಾಯಕರು ಹೈದರಾಬಾದ್‌ನಲ್ಲಿರುವ ರೆಸಾರ್ಟ್‌ಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕಾಂಗ್ರೆಸ್‌ನ ಹಗರಿಬೊಮ್ಮನಹಳ್ಳಿಯ ಶಾಸಕ ಭೀಮಾನಾಯ್ಕ ಅವರ ಹೆಸರು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಎಚ್‌.ಡಿ.ರೇವಣ್ಣ ಅವರು ಆಕಾಂಕ್ಷಿಯಾಗಿದ್ದರು. ಸಮ್ಮಿಶ್ರ ಸರಕಾರ ಇದ್ದಾಗ ಎಚ್‌.ಡಿ.ಕುಮಾರಸ್ವಾಮಿ, ಡಾ| ಜಿ.ಪರಮೇಶ್ವರ್‌, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರು ಚರ್ಚಿಸಿ ಭೀಮಾನಾಯ್ಕಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಡಲು ತೀರ್ಮಾನಿಸಲಾಗಿತ್ತು ಎಂದು ಹೇಳಲಾಗಿದೆ.

ಆದರೆ ಇದೀಗ ಉಡುಪಿ, ಧಾರವಾಡ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳ ಕಾಂಗ್ರೆಸ್‌ಗೆ ಸೇರಿದ ನಿರ್ದೇಶಕರನ್ನು ಹೈದರಾಬಾದ್‌ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರೇ ನಿರ್ದೇಶಕರನ್ನು ಹೈಜಾಕ್‌ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಜೆಡಿಎಸ್‌ ನಾಯಕರು ಇದನ್ನು ನಿರಾಕರಿಸಿದ್ದಾರೆ.

ಕೆಎಂಎಫ್ ನಲ್ಲಿ ಕಾಂಗ್ರೆಸ್‌ನ 9, ಜೆಡಿಎಸ್‌ನ ಮೂವರು ನಿರ್ದೇಶಕರಿದ್ದು ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನ ಸಿಗುತ್ತಿತ್ತು. ಆದರೆ ಇದೀಗ ನಾಲ್ವರು ನಿರ್ದೇಶಕರನ್ನು ಹೈಜಾಕ್‌ ಮಾಡಿರುವುದರಿಂದ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next