Advertisement

ಕಾರ್ಯಕ್ರಮ ವೇದಿಕೆಯಲ್ಲಿ ಕುಸಿದು ಬಿದ್ದ ಎ.ಸಿ.ಭಂಡಾರಿ

10:33 AM Mar 16, 2019 | |

ಮಂಗಳೂರು: ನಗರದ ಪುರಭವನದಲ್ಲಿ ಶನಿವಾರ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತುಳು ಸಾಹಿತ್ಯ ಅಕಾಡಮೆ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವೇದಿಕೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. 

Advertisement

ಪುರಭವನದಲ್ಲಿ ಒಂದು ವಾರದಿಂದ ತುಳು ನಾಟಕ ಪರ್ಬ ನಡೆಯುತ್ತಿದ್ದು, ಅದರ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯುತ್ತಿತ್ತು. ಇದರಲ್ಲಿ ಭಾಗವಹಿಸಲು ಎ.ಸಿ.ಭಂಡಾರಿಯವರು ವೇದಿಕೆ ಹತ್ತುವ ವೇಳೆ ಹಠಾತ್ ಆಗಿ ಕುಸಿದು ಬಿದ್ದಿದ್ದಾರೆ. 

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next