Advertisement

Belthangady ಕನ್ಯಾಡಿ ನೀರಚಿಲುಮೆ ಬಳಿ ಚರಂಡಿಗೆ ಉರುಳಿದ ಕಾರು

06:19 PM Sep 22, 2023 | Team Udayavani |

ಬೆಳ್ತಂಗಡಿ: ಕನ್ಯಾಡಿ ಸಮೀಪದ ನೀರಚಿಲುಮೆ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಸೆ.22ರಂದು ಬೆಳಗ್ಗೆ ನಡೆದಿದೆ.

Advertisement

ಬೆಳ್ತಂಗಡಿಯ ತಮ್ಮ ಕಚೇರಿಗೆ ಬರುತ್ತಿರುವ ಸಮಯ ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿ ಬಿ.ಎಂ.ಭಟ್‌ ಅವರು ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ್ದ ಕಾರು ಎಡಬದಿಗೆ ಸಂಚರಿಸುತ್ತಿದ್ದಾಗ ಕೂಡಲೇ ಅವರು ಕಾರನ್ನು ಬಲಬದಿಗೆ ತಿರುಗಿಸಿದಾಗ ಕಾರು ಬಲಬದಿಯ ರಸ್ತೆ ಚರಂಡಿಗೆ ಬಿದ್ದಿದೆ.

ಕಾರಿನ ಎದುರು ಭಾಗ ಜಖಂಗೊಂಡಿದ್ದು, ಬಿ.ಎಂ ಭಟ್‌ ಅವರು ಅಪಾಯದಿಂದ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next