Advertisement

ಬೆಳಗಾವಿ : ಪುಣೆ-ಬೆಂಗಳೂರು ಹೈವೆಗೆ ನುಗ್ಗಿದ ನದಿ ನೀರಿನಲ್ಲಿ ಸಿಲುಕಿದ ಕಾರು-ಲಾರಿ

11:28 AM Jul 23, 2021 | Team Udayavani |

ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿ ಜಲಾವೃತಗೊಂಡಿದ್ದು, ಇಲ್ಲಿ ಲಾರಿ ಮತ್ತು ಕಾರು ನೀರಿನಲ್ಲಿ ಸಿಲುಕಿಕೊಂಡಿವೆ.

Advertisement

ವೇದಗಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಾಷ್ಟೀಯ ಹೆದ್ದಾರಿಗೆ ನೀರು ಹರಿದು ಬಂದಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಎರಡು ವಾಹನಗಳು ಸಿಲುಕಿಕೊಂಡಿವೆ. ಚಾಲಕರು ಅದೃಷ್ಟವಶಾತ್ ಪಾರಾಗಿ ಬಂದಿದ್ದಾರೆ.

ಪುಣೆ-ಬೆಂಗಳೂರು ರಾಷ್ಟೀಯ ಹೆದ್ದಾರಿ ಗುರುವಾರ ರಾತ್ರಿಯಿಂದಲೇ ಬಂದ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಈಗಾಗಲೇ ಬ್ಯಾರಿಕೇಡ್ ಹಾಕಿ ಮಾರ್ಗ ಬಂದ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next