Advertisement

Sullia ವಿಷ ಸೇವಿಸಿ ಮೃತಪಟ್ಟ ಪ್ರಕರಣ: ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು

12:17 AM Aug 30, 2023 | Team Udayavani |

ಸುಳ್ಯ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಕಟ್ಟತ್ತಾರು ಸಮೀಪದ ನಿವಾಸಿ ಅಬ್ದುಲ್‌ ನಾಸಿರ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಆ. 22ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಅಬ್ದುಲ್‌ ನಾಸೀರ್‌ ಆ. 27ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಈ ಮೊದಲು ನಾಸೀರ್‌ ಅವರು ‘ನನಗೆ ಬೆಳ್ಳಾರೆಯ ಕೆಲವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದೀಗ ಮೃತ ಅಬ್ದುಲ್‌ ನಾಸೀರ್‌ಅವರ ತಾಯಿ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಅಬ್ದುಲ್‌ ನಾಸೀರ್‌ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿಗಳಾದ ಸುಮಯ್ಯ, ಅದ್ರಾಮ, ಮೊಯ್ದು, ತಾಜು, ಅಬ್ದುಲ್ಲ, ಸಮೀರ್‌, ನೌಫಲ್‌, ಅತ್ತಾವುಲ್ಲಾ ಎಂಬವರು ಕಾರಣವೆಂದು ಆರೋಪಿಸಿ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next