Advertisement

‌ಕೊಲೆ ಪ್ರಕರಣ; ಚಾರ್ಮಾಡಿಯಲ್ಲಿ ಮುಂದುವರಿದ ಶವ ಶೋಧ

04:34 PM Jan 05, 2023 | Team Udayavani |

ಬೆಳ್ತಂಗಡಿ: ಹಣಕಾಸಿನ ವಂಚನೆ ವಿಚಾರಕ್ಕಾಗಿ ಬೆಂಗಳೂರಿನ ಕೋಣನಕುಂಟೆಯ ಹರಿನಗರದ ಎಚ್‌. ಶರತ್‌ ಅವರ ಅಪಹರಣ ಹಾಗೂ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸರು ಮೃತದೇಹದ ಪತ್ತೆಗಾಗಿ ಮಂಗಳವಾರ ಚಾರ್ಮಾಡಿ ಘಾಟಿ ಪ್ರಪಾತದಲ್ಲಿ ಶೋಧ ಕಾರ್ಯ ಆರಂಭಿಸಿದ್ದು ಜ. 4ರಂದು ಮುಂದುವರಿದಿದೆ.

Advertisement

ಹಣಕಾಸು ವಿಚಾರದಲ್ಲಿ ಸುಮಾರು 9 ತಿಂಗಳ ಹಿಂದೆ ನಡೆದ ಈ ಕೊಲೆ ಪ್ರಕರಣದಲ್ಲಿ 10 ಆರೋಪಿಗಳು ಭಾಗಿಯಾಗಿದ್ದು, ಕೊಲೆ ಮಾಡಿದ ಬಳಿಕ ಶವವನ್ನು ಚಾರ್ಮಾಡಿ ಘಾಟಿಯಲ್ಲಿ ಎಸೆದಿರುವ ಕುರಿತು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದರು. ವ್ಯಕ್ತಿಯೊಬ್ಬರು ಬರೆದ ಪತ್ರ ಮತ್ತು ಹಲ್ಲೆಯ ವೀಡಿಯೋ ದೃಶ್ಯಗಳ ಆಧಾರದಲ್ಲಿ ವಿಶೇಷ ತಂಡ ರಚಿಸಿ ರಹಸ್ಯ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಈ ಬಗ್ಗೆ ಪೊಲೀಸರು, ಸ್ಥಳೀಯರ ಸಹಕಾರದಲ್ಲಿ ಚಾರ್ಮಾಡಿ ಘಾಟಿ ಭಾಗದಲ್ಲಿ ಮಂಗಳವಾರದಿಂದ ಶವದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು ಕರೆದುಕೊಂಡು ಬಂದಿರುವ ಇಬ್ಬರು ಆರೋಪಿಗಳು ಕ್ಷಣಕ್ಕೊಂದು ಸ್ಥಳ ವನ್ನು ತೋರಿಸುತ್ತಿದ್ದುದರಿಂದ ಕಾರ್ಯಾಚರಣೆ ಜಟಿಲಗೊಳ್ಳುತ್ತಿದೆ ಎಂದು ತಿಳಿದು ಬಂದಿದೆ. ಆದರೆ ಇಷ್ಟರವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಚಾರ್ಮಾಡಿ ಘಾಟಿ ಪ್ರಪಾತದಲ್ಲಿ ಹುಡುಕಾಟ ಕಠಿನವಾಗಿದ್ದು ಹಗ್ಗದ ಸಹಾಯದಿಂದ ಕೆಳಕ್ಕಿಳಿದು ಪರಿಶೀಲನೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next