Advertisement

Bangalore: ಬಾಂಬ್‌ ಇದೆ ಎಂದು ಆತಂಕ ಸೃಷ್ಟಿಸಿದ ವಿಮಾನ ಪ್ರಯಾಣಿಕನ ವಿರುದ್ಧ ಕೇಸು

11:18 AM Jan 31, 2024 | Team Udayavani |

ಬೆಂಗಳೂರು: ಲಗೇಜ್‌ ತಪಾಸಣೆ ವೇಳೆ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೇಳಿ ಪ್ರಯಾಣಿಕನೊಬ್ಬ ಆತಂಕ ಸೃಷ್ಟಿಸಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ.28ರಂದು ಸಂಜೆ 7.28ಕ್ಕೆ ಈ ಘಟನೆ ನಡೆದಿದೆ.

Advertisement

ಕೆಐಎ ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಸಹಾಯಕ ವ್ಯವಸ್ಥಾಪಕ ಯು. ಗಣೇಶ್‌ ಎಂಬವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್‌ ಠಾಣೆ ಪೊಲೀಸರು ಕೇರಳ ಮೂಲದ ಸಜು ಕೆ.ಕುಮಾರನ್‌(32) ಎಂಬಾನನ್ನು ಬಂಧಿಸಿ, ಹೇಳಿಕೆ ದಾಖಲಿಸಿಕೊಂಡ ಠಾಣಾ ಜಾಮೀನಿನ ಮೇಲೆ ಬಿಡು ಗಡೆಗೊಳಿಸಿದ್ದಾರೆ.

ಏನಿದು ಘಟನೆ?: ಕೇರಳ ಮೂಲದ ಸಜು ಕೆ.ಕುಮಾರನ್‌ ನಗರದ ಪೀಣ್ಯ ಕೈಗಾರಿಕಾ ಪ್ರದೇಶದ ಫಾರ್ಮಾ ಕಂಪನಿ ಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕೇರಳದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ತುರ್ತಾಗಿ ಕೊಚ್ಚಿಗೆ ಪ್ರಯಾಣ ಬೆಳೆಸಬೇಕಿದ್ದರಿಂದ ಜ.28ರಂದು ಸಂಜೆ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಲಗೇಜ್‌ ತಪಾಸಣೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೋಪಗೊಂಡು ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ. ಆದರೂ, ಸಾರ್ವಜನಿಕ ಸ್ಥಳದಲ್ಲಿ ಕಿಡಿಗೇಡಿತನ ಪ್ರದರ್ಶಿಸಿದ ಆತನ ವಿರುದ್ಧ ಎಫ್ಐಆರ್‌ ದಾಖಲಿಸಿ ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next