Advertisement

BSY ಕೆಳಗಿಳಿಸಿದ್ದಕ್ಕೆ ಹೀನಾಯ ಸೋಲು: ರೇಣುಕಾಚಾರ್ಯ

10:59 PM Jun 27, 2023 | Team Udayavani |

ಹೊನ್ನಾಳಿ: ಬಿಜೆಪಿ ಸರಕಾರದ ತಪ್ಪು ನಿರ್ಧಾರ ಹಾಗೂ ಮಾಸ್‌ ಲೀಡರ್‌ ಬಿ.ಎಸ್‌. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ, ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದರಿಂದ ಬಿಜೆಪಿಗೆ ಹೀನಾಯ ಸೋಲಾಯಿತು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಎಲ್ಲ ವರ್ಗದವರು ನಮ್ಮ ಪಕ್ಷದ ಬಗ್ಗೆ ಬೇಸರಗೊಂಡಿದ್ದರು. ಬಿಎಸ್‌ವೈ ಅವರನ್ನು ಸಿಎಂ ಕುರ್ಚಿಯಿಂದ ಇಳಿಸಿದ್ದೀರಿ, ಅವರ ಕಣ್ಣೀರಿನಲ್ಲಿ ಪಕ್ಷ ಕೊಚ್ಚಿ ಹೋಗಲಿದೆ ಎಂದು ಸ್ವಾಮೀಜಿಯೊಬ್ಬರು ಹೇಳಿದ್ದರು. ಅದರಂತೆ ನಮ್ಮ ಪಕ್ಷ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಒಳಮೀಸಲಾತಿ ಜಾರಿಗೆ ತನ್ನಿ ಎಂದು ಯಾರೂ ಕೇಳಿರಲಿಲ್ಲ. ಮೀಸಲಾತಿ ವಿಚಾರಕ್ಕೆ ಈಗ ಕೈ ಹಾಕಬೇಡಿ ಎಂದರೂ ಕೇಳದೆ ಒಳಮೀಸಲಾತಿ ಜಾರಿಗೆ ತಂದರು.

ಇದರ ಪರಿಣಾಮ ನಮ್ಮ ಸೋಲಿಗೆ ಕಾರಣವಾಯಿತು. ಸೋತು ಸುಣ್ಣವಾದರೂ ನಮ್ಮ ಪಕ್ಷದ ನಾಯಕರು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಇನ್ನೂ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ರಾಜ್ಯಾಧ್ಯಕ್ಷ ಕಟೀಲ್‌ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆಂದು ಹೇಳುತ್ತಾರೆ, ಮತ್ತೂಮ್ಮೆ ರಾಜೀನಾಮೆ ನೀಡಿಲ್ಲ ಎಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಸೋತು ಸುಣ್ಣವಾಗಿದ್ದರೂ ಬಿಜೆಪಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next