Advertisement

ವಿಟ್ಲ: ಮರಕ್ಕೆ ಗುದ್ದಿದ ಕಾರು; ಮೂವರಿಗೆ ಗಂಭೀರ ಗಾಯ

02:53 PM Feb 27, 2022 | Team Udayavani |

ವಿಟ್ಲ: ವಿಟ್ಲ- ಕಾಸರಗೋಡು ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಘಟನೆ ಭಾನುವಾರ ನಡೆದಿದೆ.

Advertisement

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು ಓರ್ವ ಗಂಭೀರವಾಗಿದ್ದು, ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಮಗಳ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ಕೇರಳದ ಮಹಿಳೆ !

ಚಾಲಕ ಕುಡಿದ ಮತ್ತಿನಲ್ಲಿದ್ದರಿಂದ ಈ ಅಪಘಾತ ಸಂಭವಿಸಿದೆಯೆನ್ನಲಾಗಿದೆ. ಪೇಟೆಯಲ್ಲಿ ಬೈಕ್ ಮತ್ತು ಕಾರಿಗೆ ಗುದ್ದಿ, ಈ ಕಾರು ಮುಂದುವರಿದು ಅರ್ಧ ಕಿಮೀ ದೂರದಲ್ಲಿ ಮರಕ್ಕೆ ಗುದ್ದಿದೆ ಎನ್ನಲಾಗಿದೆ. ಇವರೆಲ್ಲರೂ ಕೇರಳ ಮೂಲದವರೆಂದು ತಿಳಿದುಬಂದಿದೆ. ವಿಟ್ಲ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next