Advertisement

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

11:37 PM Jun 17, 2024 | Team Udayavani |

ಮಂಗಳೂರು: ಮುಸ್ಲಿ ಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್‌(ಈದುಲ್ ಅಝ್ಹಾ) ಅನ್ನು ಕರಾವಳಿ ಯಾದ್ಯಂತ ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

Advertisement

ಮುಸಲ್ಮಾನರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್‌ ಖುತ್ಬಾ ಮತ್ತುಪ್ರವಚನ ಆಲಿಸಿ, ಈದ್‌ ಸಂದೇಶ ಸ್ವೀಕರಿಸಿದರು. ಬಳಿಕ ಸಂಬಂಧಿಕರು- ಸ್ನೇಹಿತರ ಮನೆಗಳಿಗೆ ಸೌಹಾರ್ದ ಭೇಟಿ ನೀಡಿ ಶುಭಾಶಯ ಕೋರಿದರು.ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ ಸಹಿತ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಕಡಬ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಸುರತ್ಕಲ್‌ ಮೊದಲಾದೆಡೆಗಳ ಮಸೀದಿಗಳಲ್ಲೂ ಸಾಮೂಹಿಕ ನಮಾಝ್, ಈದ್‌ ಖುತಾº ಮತ್ತು ಪ್ರವಚನಗಳು ನೆರವೇರಿದವು.

ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ದ.ಕ. ಜಿಲ್ಲಾ ಖಾಝಿ ಅಲ್ಹಾಜ್‌ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಅಲ್‌-ಅಝರಿ ನೇತೃತ್ವದಲ್ಲಿ ಈದ್‌ ನಮಾಝ್ ಹಾಗೂ ಖುತ್ಬಾ ಪಾರಾಯಣ ನಡೆಯಿತು. ಮಂಗಳೂರು ಝೀನತ್‌ ಭಕ್ಷ್ ಕೇಂದ್ರ ಜುಮಾ ಮಸ್ಜಿದ್‌ನ ಖತೀಬ್‌ ಅಬ್ದುಲ್‌ ಅಕ್ರಂ ಬಾಖವಿ ನಮಾಝ್  ನೇತೃತ್ವ ನೀಡಿದರು.

ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ನಮಾಜ್‌ನಲ್ಲಿ ಭಾಗವಹಿಸಿದರು. ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ ಸೋಜಾ, ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಭಾಗವಹಿಸಿ ಶುಭ ಹಾರೈಸಿದರು.
ಈದ್‌ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗಿ#ರತ್‌ಗಾಗಿ ಪ್ರಾರ್ಥಿಸಿದರು.

ಉಡುಪಿ: ಜಿಲ್ಲಾದ್ಯಂತ ಸೋಮವಾರ ಬಕ್ರೀದ್‌ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸ ಲಾಯಿತು. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್‌ ನಮಾಝ್ ನೆರವೇರಿಸಲಾಯಿತು. ಕೆಲವು ಮಸೀದಿಗಳಲ್ಲಿ ಮಹಿಳೆಯ ರಿಗೂ ಈದ್‌ ನಮಾಝ್ ನಿರ್ವಹಿ ಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.

Advertisement

ಉಡುಪಿ ಜಾಮೀಯ ಮಸೀದಿ ಯಲ್ಲಿ ಮೌಲಾನಾ ಅಬ್ದುರ್ರಶೀದ್‌ ನದ್ವಿ ನೇತೃತ್ವದಲ್ಲಿ ಮತ್ತು ಅಂಜುಮಾನ್‌ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್‌ ನಮಾಝ್ ನಡೆಯಿತು. ನಾಯರ್‌ ಕೆರೆಯ ಹಾಶಿಮಿ ಮಸೀದಿಯಲ್ಲಿ ಈದ್‌ ನಮಾಝ್ ನೇತೃತ್ವವನ್ನು ಮೌಲಾನಾ ಒಬೈದುರ್‌ ರೆಹಮಾನ್‌ ನದ್ವಿ ವಹಿಸಿದ್ದರು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್‌ ಹಾಫಿಲ್‌ ಮುಹಮ್ಮದ್‌ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್‌ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.

ಕುಂದಾಪುರ ಜುಮಾ ಮಸೀದಿ ಯಿಂದ ಬೆಳಗ್ಗೆ ಈದ್‌ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್‌ ಹುಸೇನ್‌ ನೇತೃತ್ವ ದಲ್ಲಿ ಈದ್‌ ವಿಶೇಷ ನಮಾಝ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್‌ ನದ್ವಿ, ಮೊಹಿದೀನ್‌ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್‌ ಕರೀಂ ನದ್ವಿ, ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ರೆಹಮ ತುಲ್ಲಾ ಕೋಲ್ಕರ್‌ ನದ್ವಿ ನೇತೃತ್ವದಲ್ಲಿ ನಮಾಝ್ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next