Advertisement

ಉದ್ಯಮಿ ಪುತ್ರರಿಬ್ಬರ ಮಧ್ಯೆ ಹೊಡೆದಾಟ

04:49 PM Jun 11, 2023 | Team Udayavani |

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರು ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಆರ್‌.ಟಿ.ನಗರ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.

Advertisement

ಘಟನೆಯಲ್ಲಿ ವೈಷ್ಣವಿ ಬಿಲ್ಡರ್ಸ್‌ನ ಗೋವಿಂದರಾಜು ಅವರ ಪುತ್ರ ದರ್ಶನ್‌ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯ ಎಸಗಿದ ವಿಎಆರ್‌ ಬಿಲ್ಡರ್ಸ್‌ ಸಂಜಯ್‌ ದುಗಾರ್‌ ಪುತ್ರ ವೇದಾಂತ್‌ ದುಗಾರ್‌ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ದರ್ಶನ್‌ ಮತ್ತು ವೇದಾಂತ್‌ ಸ್ನೇಹಿತರಾಗಿದ್ದು, ಕೆಲ ದಿನಗಳಿಂದ ಪರಸ್ಪರ ಇಬ್ಬರು ಮಾತನಾಡಿರಲಿಲ್ಲ. ಈ ಮಧ್ಯೆ ಶುಕ್ರವಾರ ರಾತ್ರಿ ಠಾಣೆ ವ್ಯಾಪ್ತಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮದುವೆಯೊಂದಕ್ಕೆ ಇಬ್ಬರು ಬಂದಿದ್ದರು. ಈ ವೇಳೆ ದರ್ಶನ್‌ ಮತ್ತು ವೇದಾಂತ್‌ ನಡುವೆ, ಯಾವ ಕಾರಣಕ್ಕೆ ಮಾತನಾಡುತ್ತಿಲ್ಲ ಎಂದು ಪರಸ್ಪರ ವಾಗ್ವಾದ ನಡೆದಿದೆ.

ಅದು ವಿಕೋಪಕ್ಕೆ ಹೋದಾಗ, ಆಕ್ರೋಶಗೊಂಡ ವೇದಾಂತ್‌ ಬಿಯರ್‌ ಬಾಟಲಿಯಿಂದ ದರ್ಶನ್‌ ತಲೆಗೆ ಹೊಡೆದಿದ್ದಾನೆ. ಘಟನೆಗೆ ದರ್ಶನ್‌ಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ಆರ್‌.ಟಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next