Advertisement

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ: ಓರ್ವ ಗಂಭೀರ

09:18 PM Aug 09, 2022 | Team Udayavani |

ಗದಗ: ಕ್ಷುಲ್ಲಕ ಕಾರಣಕ್ಕೆ ನಾಲ್ವರು ಯುವಕರ ಮಧ್ಯೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲಸಮುದ್ರದಲ್ಲಿ ಮಂಗಳವಾರ ನಡೆದಿದೆ.

Advertisement

ಮಲ್ಲಸಮುದ್ರ ಗ್ರಾಮದ ತೌಸಿಫ್ ಹೊಸಮನಿ(23) ಗಂಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ವಿವರ: ಮಲ್ಲಸಮುದ್ರ ಗ್ರಾಮದಲ್ಲಿ ಮೊಹರಂ ಕೊನೆ ದಿನವಾದ ಮಂಗಳವಾರ ಸಂಜೆ ಮೆರವಣಿಗೆ ಮುಸ್ತಫಾ ಹೊಸಮನಿ, ತೌಸಿಫ್ ಹೊಸಮನಿ ಮತ್ತು ಸೋಮು ಗುಡಿ ಹಾಗೂ ಯಲ್ಲಪ್ಪ ಅವರ ಮಧ್ಯೆ ‘ಕಾಲು ತುಳಿದ’ ಕಾರಣಕ್ಕೆ ವಾಗ್ವಾದ ನಡೆದಿದೆ.

ಈ ವೇಳೆ ಸೋಮು ಗುಡಿ ತೌಸಿಫ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ತೌಸಿಫ್ ಸ್ಥಿತಿ ಗಂಭೀರವಾಗಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಮಡಿಕೇರಿ – ಮಂಗಳೂರು ಹೆದ್ದಾರಿಯಲ್ಲಿ ಇಂದು ರಾತ್ರಿ ವಾಹನ  ಸಂಚಾರ ಬಂದ್

Advertisement

ನಾಲ್ವರು ಯುವಕರ ಮಧ್ಯೆ ವೈಯಕ್ತಿಕ ಕಾರಣಕ್ಕೆ ಈ ಘಟನೆ ನಡೆದಿದೆ. ತೌಸಿಫ್ ಸ್ಥಿತಿ ಗಂಭೀರವಾಗಿದ್ದು,  ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮುಂದಿವರಿದಿದೆ. ಅಲ್ಲದೇ, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next