Advertisement

Chikkamagaluru: ಮನೆ ಯಜಮಾನನ ಶವಸಂಸ್ಕಾರಕ್ಕೆ ತೆರಳಿದ್ದಾಗ ಮನೆಯಲ್ಲಿ ಬೆಂಕಿ ಅನಾಹುತ…

06:39 PM Aug 01, 2023 | Team Udayavani |

ಚಿಕ್ಕಮಗಳೂರು: ವಿಧಿಯ ಕ್ರೂರತ್ವಕ್ಕೆ ಕಾಫಿನಾಡ ಈ ಘಟನೆ ಜೀವಂತ ಸಾಕ್ಷಿ. ಅಜ್ಜಂಪುರ ತಾಲೂಕಿನ ಬಾಣೂರು ಗ್ರಾಮದಲ್ಲಿ ಹನುಮಂತಪ್ಪ ಎಂಬವರು ಮರಣ ಹೊಂದಿದ್ದರು. ಮನೆಯವರು ಅವರ ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ತೆರಳಿದ್ದಾಗ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮನೆ ಸುಟ್ಟು ಕರಕಲಾಗಿದೆ. ಅಲ್ಲದೇ ಕೊಟ್ಟಿಗೆಯಲ್ಲಿದ್ದ ರಾಸುಗಳೂ ಸಜೀವ ದಹನವಾಗಿದೆ.

Advertisement

ಮನೆಯಲ್ಲಿದ್ದ ಗ್ಯಾಸ್‍ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದ್ದರಿಂದ ಅನಾಹುತ ಸಂಭವಿಸಿದೆ.  ಸಿಲಿಂಡರ್ ಬ್ಲಾಸ್ಟ್ ಆಗಿ ಮನೆ, ಮನೆ ಸಾಮಾನು, ಕೊಟ್ಟಿಗೆ, ಹಸು, ಕುರಿ ಎಲ್ಲವೂ ಬೆಂಕಿಗಾಹುತಿಯಾಗಿದೆ.

ಮೊದಲೇ ದುಃಖದಲ್ಲಿದ್ದ ಕುಟುಂಬಸ್ಥರಿಗೆ ಈ ಘಟನೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರೂ ಅದಾಗಲೇ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿತ್ತು.

ಇದನ್ನೂ ಓದಿ: Chikkamagaluru ಕಾಫಿತೋಟದಲ್ಲಿ ಬೀಡು ಬಿಟ್ಟ ಕಾಡಾನೆ ಹಿಂಡು; ಗ್ರಾಮಸ್ಥರ ಆತಂಕ!

 

Advertisement
Advertisement

Udayavani is now on Telegram. Click here to join our channel and stay updated with the latest news.

Next