Advertisement

ಮಣಿಪಾಲದಲ್ಲೊಂದು ಬೃಹತ್‌ ಗಾತ್ರದ ಸೊಳ್ಳೆ

04:20 PM Aug 23, 2022 | Team Udayavani |

ಮಣಿಪಾಲ: ಸಮುದಾಯ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಸೋಮವಾರ ಕಲಾವಿದ ಶ್ರೀನಾಥ್‌ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಅವರು ಮಾಹೆಯ ಇಂಟರ್ಯಾಕ್ಟ್ ಆವರಣದಲ್ಲಿ ಡೆಂಗ್ಯೂ, ಮಲೇರಿಯಾ, ಇನ್ನಿತರ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಒಂದು ಬೃಹತ್‌ ಗಾತ್ರದ ಸೊಳ್ಳೆಯ ಕಲಾಕೃತಿಯನ್ನು ರಚಿಸಿದ್ದಾರೆ.

Advertisement

ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ| ಅಶ್ವಿ‌ನಿ ಕುಮಾರ್‌ ಕಲಾಕೃತಿಯನ್ನು ಅನಾವರಣಗೊಳಿಸಿ, ಸೊಳ್ಳೆ ಮಾನವ ಕುಲಕ್ಕೆ ಅತೀ ಅಪಾಯಕಾರಿ. ಇವುಗಳು ಹರಡುವ ರೋಗಗಳಿಂದ ವಿಶ್ವಾದ್ಯಂತ ಲಕ್ಷಾಂತರ ಜನರು ಬಲಿಯಾಗುತ್ತಿದ್ದಾರೆ. ಇವುಗಳು ಮಳೆಗಾಲದಲ್ಲಿ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ 3ಡಿ ಕಲಾಕೃತಿಯನ್ನು ರಚಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next