Advertisement

ಮಂಡ್ಯ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

10:02 AM Dec 19, 2022 | Team Udayavani |

ಮಂಡ್ಯ: ಕಳೆದ ಹಲವು ದಿನಗಳಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭಯ ಉಂಟು ಮಾಡಿದ್ದ ಚಿರತೆ ಡಿ.19ರ ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

Advertisement

ತಾಲೂಕಿನ ಲೋಕಸರ ಗ್ರಾಮದಲ್ಲಿ ಹಲವು ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದರು. ಅಲ್ಲದೆ ಚಿರತೆ ನಾಯಿ ಸೇರಿದಂತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು ಭಯಭೀತಗೊಂಡಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗಳು ಇತ್ತೀಚೆಗೆ ಬೋನು ಇರಿಸಿದ್ದರು. ಪರಿಣಾಮ ಸೋಮವಾರ ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ನೋಡಲು ಸುತ್ತಮುತ್ತಲ ಗ್ರಾಮಸ್ಥರು ಜಮಾಯಿಸಿದ್ದರು.

ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಯನ್ನು ಕಾಡಿಗೆ ಬಿಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next