Advertisement

ಶ್ಯಾದನಹಳ್ಳಿಯ ತೋಟದಲ್ಲಿ ಬೋನಿಗೆ ಬಿದ್ದ ಚಿರತೆ

12:33 PM Feb 06, 2023 | Team Udayavani |

ಮೈಸೂರು: ತಾಲ್ಲೂಕಿನ ಶ್ಯಾದನಹಳ್ಳಿಯ ತೋಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಭಾನುವಾರ ರಾತ್ರಿ‌ ಮೂರು ವರ್ಷದ ಗಂಡು ಚಿರತೆ ಬಿದ್ದಿದೆ.

Advertisement

ಭಾರತೀಯ ರಿಸರ್ವ್ ಬ್ಯಾಂಕ್ ಕ್ಯಾಂಪಸ್ ಹಿಂಭಾಗದಲ್ಲಿ ಈ ತೋಟವಿದೆ. ಇಲಾಖೆಯು ವಾರದ ಹಿಂದೆಯಷ್ಟೇ ಬೋನು ಇರಿಸಿತ್ತು.

ಇದನ್ನೂ ಓದಿ:ಟಿ20 ಮ್ಯಾಚ್; ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿದ ಇಫ್ತಿಕಾರ್ ಅಹಮದ್; ವಿಡಿಯೋ ನೋಡಿ

ಆರ್‌ಎಫ್ಒ ಕೆ.ಸುರೇಂದ್ರ ನೇತೃತ್ವದ ‌ಸಿಬ್ಬಂದಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ  ಸೋಮವಾರ ರವಾನಿಸಿದರು.

ವರ್ಷದ ಹಿಂದೆ ಆರ್ ಬಿಐ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಆದರೆ, ಪತ್ತೆಯಾಗಿರಲಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next