Advertisement

ಪಕ್ಷಾಂತರಿಗಳಿಗೆ ಜನತೆ ತಕ್ಕ ಪಾಠ: ದಿನೇಶ್‌

10:53 PM Nov 26, 2019 | Lakshmi GovindaRaj |

ಹುಬ್ಬಳ್ಳಿ: “ದೇಶವನ್ನೇ ಲೂಟಿ ಹೊಡೆದಿರುವ ಬಿಜೆಪಿ ನಾಯಕರು, ಇತರೆ ಪಕ್ಷಗಳ ಶಾಸಕರಿಗೆ ಹಣದ ಆಮಿಷವೊಡ್ಡಿ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದು ಜನ ಬಿಜೆಪಿ ಹಾಗೂ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ನಂತರ ಮತ್ತಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎನ್ನುವ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ ಗಮನಿಸಿದರೆ ಹಣದ ಹೊಳೆಹರಿಸಲು ಮತ್ತೆ ಸಜ್ಜಾಗಿದ್ದಾರೆ.

Advertisement

ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಕಾರ ಣಕ್ಕೆ ದೇಶ ಲೂಟಿ ಮಾಡಿದ ಹಣದಿಂದ ಶಾಸಕರನ್ನು ಕೊಂಡುಕೊಳ್ಳುತ್ತಿ ದ್ದಾರೆ. ಅವರೆಲ್ಲಾ, ರಾಜಕೀಯವಾಗಿ ನೈತಿಕತೆ ಕಳೆದುಕೊಂಡಿದ್ದಾರೆಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಶಾಸಕರಿಗೆ ಹಲವು ಆಮಿಷ ಹಾಗೂ ಬೆದರಿಕೆ ಹಾಕಿ ರಾಜೀನಾಮೆ ಕೊಡಿಸಿದ್ದಾರೆ. ರಾಜ್ಯದಲ್ಲಿ ಕೃತಕ ಬಹುಮತ ಸೃಷ್ಟಿಸಿ ನಡೆಯುತ್ತಿರುವ ಸರ್ಕಾರ ಬಹಳ ದಿನ ನಡೆಯಲ್ಲ. ಈ ಉಪ ಚುನಾವಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ತಿರುವು ನೀಡಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next