Advertisement

ಉಪ್ಪಿನಂಗಡಿ: ತೊರೆಗೆ ಬಿದ್ದ ಗ್ಯಾಸ್‌ ಲಾರಿ

10:29 AM Jul 23, 2019 | Team Udayavani |

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ಯ ಬಜತ್ತೂರು ವಳಾಲುನಲ್ಲಿ ಅಡುಗೆ ಅನಿಲ ಸಿಲಿಂಡರ್‌ ತುಂಬಿದ್ದ ಲಾರಿಯೊಂದು ತೊರೆಗೆ ಉರುಳಿ ಬಿದ್ದ ಘಟನೆ ರವಿವಾರ ಮುಂಜಾನೆ ನಡೆದಿದೆ.

Advertisement

ಬೆಂಗಳೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ಬಜತ್ತೂರು ವಳಾಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ತೊರೆಗೆ ಬಿದ್ದಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಪುತ್ತೂರು ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಅಡ್ಡಹೊಳೆಯಿಂದ ಕಲ್ಲಡ್ಕ ತನಕ ಹೆದ್ದಾರಿ ಅಗೆದು ಹಾಕಿರುವುದರಿಂದ ವಾಹನ ಸವಾರರಿಗೆ ಮಳೆಗಾಲದಲ್ಲಿ ಗೊಂದಲದ ಸ್ಥಿತಿ ಉಂಟಾಗುತ್ತಿದ್ದು, ಈ ಭಾಗದ ಪ್ರಯಾಣ ದುಸ್ಥರವಾಗಿದೆ

Advertisement
Advertisement

Udayavani is now on Telegram. Click here to join our channel and stay updated with the latest news.

Next