Advertisement

ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

03:02 PM Mar 15, 2023 | Team Udayavani |

ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ.

Advertisement

ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು ಸೌದಿ ಅರೇಬಿಯಾಗೆ ತೆರಳಿದ್ದರು. ಆದರೆ ಮಂಗಳವಾರಸೌದಿ ಅರೇಬಿಯಾದ ಬುರೈದದಲ್ಲಿ ಮೃತಪಟ್ಟಿದ್ದಾರೆ.

ಮಗನ ರೂಂನಲ್ಲಿ ಮಲಗಿದ್ದ ಹಸನಬ್ಬ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಪತ್ನಿ ಮತ್ತು ಮಕ್ಕಳ ಜೊತೆ ಸೌದಿಗೆ ತೆರಳಿ ಉಮ್ರಾ ನಿರ್ವಹಿಸುವ ಉದ್ದೇಶವನ್ನು ಹೊಂದಿದ್ದರು. ಇದೀಗ ಅವರ ಅಕಾಲಿಕ ಮರಣದ  ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next