Advertisement

Gangolli ಮೂಲದ ವ್ಯಕ್ತಿ ಸೌದಿಯಲ್ಲಿ ಸಾವು

11:54 PM Sep 25, 2024 | Team Udayavani |

ಗಂಗೊಳ್ಳಿ: ಇಲ್ಲಿನ ಜಾಮಿಯಾ ಮೊಹಲ್ಲಾ ಪೊಲೀಸ್‌ ಚೆಕ್‌ಪೋಸ್ಟ್‌ ಎದುರಿನ ನಿವಾಸಿ ಬಶೀರ್‌ ಅಹ್ಮದ್‌ ಅವರ ಪುತ್ರ ಮುಬಾಶೀರ್‌ ಬಶೀರ್‌ (30) ಅವರು ಸೌದಿ ಅರೇಬಿಯಾದಲ್ಲಿ ಹಠಾತ್ತನೆ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 25ರಂದು ಮಧ್ಯಾಹ್ನ ಸಂಭವಿಸಿದೆ.

Advertisement

ಮುಬಾಶೀರ್‌ ಅವರು ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. 2 ವರ್ಷದ ಹಿಂದೆ ಮಹಾರಾಷ್ಟ್ರದ ಪುಣೆಯ ಯುವತಿಯೊಂದಿಗೆ ವಿವಾಹವಾಗಿದ್ದು, ಬಳಿಕ ಪತ್ನಿಯೊಂದಿಗೆ ಸೌದಿಯಲ್ಲಿಯೇ ನೆಲೆಸಿದ್ದರು. ಮೃತರು ಪತ್ನಿ, ತಾಯಿ, ತಂದೆ ಹಾಗೂ ಸಹೋದರನನ್ನು ಅಗಲಿದ್ದಾರೆ.

ಅವರು ಕುಂದಾಪುರದ ಎಚ್‌ಎಂಎಂ ಶಾಲೆ, ವಿಕೆಆರ್‌ ಶಾಲೆ, ಭಂಡಾರ್‌ಕಾರ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿ ಅನಂತರ ಭಟ್ಕಳದ ಅಂಜುಮಾನ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಪೂರೈಸಿ ಸೌದಿಗೆ ತೆರಳಿದ್ದರು.

ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನು ಪ್ರಕ್ರಿಯೆಗಳು ಮುಗಿದ ಅನಂತರವೇ ತಿಳಿದು ಬರಬೇಕಿದೆ.

ಕಷ್ಟಕ್ಕೆ ನೆರವಾಗುತ್ತಿದ್ದರು: ಊರಿನಲ್ಲಿದ್ದಾಗ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದ ಮುಬಾಶೀರ್‌ ಅವರು 4 ವರ್ಷಗಳ ಹಿಂದೆ ತ್ರಾಸಿ – ಮರವಂತೆ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಉಪ್ಪಿನಂಗಡಿ ಮೂಲದ ಬಾಲಕನ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ಗಂಗೊಳ್ಳಿಯ ತನ್ನ ಮನೆಯಲ್ಲಿಯೇ ನೆರವೇರಿಸಲು ಅವಕಾಶ ಮಾಡಿಕೊಟ್ಟಿದ್ದರು. ಮಾತ್ರವಲ್ಲದೆ ಘಟನೆಯ ಗಾಯಾಳುವಿನ ಆಸ್ಪತ್ರೆ ವೆಚ್ಚವನ್ನು ತಾನೇ ಭರಿಸಿದ್ದರು. ಕಷ್ಟದಲ್ಲಿ ಇದ್ದಾಗ ಸಹಾಯ ಮಾಡುವುದಲ್ಲದೇ, ತುರ್ತು ಸಂದರ್ಭ ಅವರು ನೆರವಿಗೆ ಧಾವಿಸುತ್ತಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next