Advertisement

Sullia: ಸುಣ್ಣವೆಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು

11:45 PM Jan 04, 2024 | Team Udayavani |

ಸುಳ್ಯ: ಸುಣ್ಣವೆಂದು ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜ. 2ರಂದು ಸಂಭವಿಸಿದೆ.

Advertisement

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಮೊರಂಗಲ್ಲು ಲೀಲಾವತಿ ಅವರ ಪುತ್ರ ಅಶೋಕ (28) ಮೃತಪಟ್ಟವರು. ಅವರಿಗೆ 8 ವರ್ಷಗಳ ಹಿಂದೆ ವಿವಾಹವಾಗಿದ್ದು ಪತ್ನಿ, ಮಕ್ಕಳೊಂದಿಗೆ ಮೊರಂಗಲ್ಲಿನಲ್ಲಿ ವಾಸವಾಗಿದ್ದರು. ಡಿ. 28ರಂದು ಮದ್ಯ ಸೇವಿಸಿ ಅಮಲಿನಲ್ಲಿ ಇಲಿ ಪಾಷಾಣ ಟ್ಯೂಬ್‌ನಲ್ಲಿದ್ದ ಜೆಲ್‌ ಅನ್ನು ಸುಣ್ಣವೆಂದು ಭಾವಿಸಿ ಎಲೆ ಅಡಿಕೆಗೆ ಹಾಕಿ ತಿಂದಿದ್ದರು. ಅಸ್ವಸ್ಥಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next