Advertisement

ಉಪ್ಪಿನಂಗಡಿ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನಾಪತ್ತೆ

02:01 AM Dec 27, 2022 | Team Udayavani |

ಉಪ್ಪಿನಂಗಡಿ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಸೋಮವಾರ ರಾತ್ರಿ ಸಂಭಸಿದೆ.

Advertisement

ಮೊಗ್ರು ಗ್ರಾಮದ ದಂಡುಗ ಮನೆ ನಿವಾಸಿ ಜನಾರ್ದನ (42) ನಾಪತ್ತೆಯಾದವರು. ಅವರು ತನ್ನ ಸ್ನೇಹಿತ ಮಹೇಶ್‌ ಅವರೊಡಗೂಡಿ ಮುಗೇರಡ್ಕ ಎಂಬಲ್ಲಿ ನೇತ್ರಾವತಿ ನದಿಗೆ ಬಲೆ ಹಾಕಿ ಮೀನು ಹಿಡಿಯಲು ನೀರಿಗಿಳಿದಿದ್ದರು. ನೀರಿಗಿಳಿದ ಸ್ಥಳವು ಅಣೆಕಟ್ಟು ನಿರ್ಮಾಣವಾಗುತ್ತಿದ್ದ ಸ್ಥಳವಾಗಿದ್ದರಿಂದ ಕೆಸರು ತುಂಬಿ ಅಪಾಯಕಾರಿಯಾಗಿತ್ತು. ಮೊದಲು ನೀರಿಗಿಳಿದಿದ್ದ ಜನಾರ್ದನ ಅವರು ನೀರಿನಲ್ಲಿ ಮುಳುಗಿ ನಾಪತ್ತೆಯಾದರೆಂದೂ ತಿಳಿದ ಮಹೇಶ್‌ ರಕ್ಷಣೆಗೆ ಸ್ಥಳೀಯರ ಸಹಕಾರ ಪಡೆಯದೆ ನೇರವಾಗಿ ಜನಾರ್ದನ್‌ ಅವರ ಮನೆಗೆ ಹೋಗಿ ಅವರು ನೀರಿನಲ್ಲಿ ಮುಳುಗಿ ನಾಪತ್ತೆಯಗಿದ್ದಾರೆ ಎಂದು ತಿಳಿಸಿದ್ದರು.

ಅನಂತರ ಬಾರಿಗೆ ತೆರಳಿ ಬಾರಿನಲ್ಲಿ ಮದ್ಯ ಸೇವಿಸುತ್ತಿದ್ದ ಮಹೇಶ್‌ನಿಗೆ ಜನಾರ್ದನ್‌ ಸಂಬಂಧಿಕರು ಹಾಗೂ ಗೆಳೆಯರ ಬಳಗ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next