Advertisement

ಬಿಜೆಪಿಗೆ ಎ.ಮಂಜು ಸೇರ್ಪಡೆ ಖಚಿತ

12:30 AM Mar 12, 2019 | Team Udayavani |

ಹಾಸನ: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಎ.ಮಂಜು ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲು ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಎ.ಮಂಜು ಅವರು ಬಿಜೆಪಿಗೆ ಸೇರ್ಪಡೆಯಾಗುವುದನ್ನು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿದ್ದು, ಒಂದೆರಡು ದಿನಗಳಲ್ಲಿ ಅವರಿಗೆ ಟಿಕೆಟ್‌ ಕೂಡ ಘೋಷಣೆಯಾಗಲಿದೆ ಎಂದು ಆ ಮೂಲಗಳು ತಿಳಿಸಿವೆ.

Advertisement

ಧರ್ಮಸ್ಥಳದಲ್ಲಿ ಸೋಮವಾರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಾಸನಕ್ಕೆ ಆಗಮಿಸಿ ಗಾಂಧಿಬಜಾರ್‌ನಲ್ಲಿರುವ ನೀರು ಬಾಗಿಲು ಆಂಜನೇಯ ದೇವಾಲಯದಲ್ಲಿ  ಪೂಜೆ ಸಲ್ಲಿಸಿದ ಮಂಜು, ರಾಜಕೀಯ ವಿರೋಧಿಗಳನ್ನು ಸದೆ ಬಡಿಯಲು ಮೊದಲನೆಯದಾಗಿ ದೇವರ ಆಶೀರ್ವಾದ ಪಡೆದಿದ್ದೇನೆ. ಯಡಿಯೂರಪ್ಪ ಅವರನ್ನು ಮೂರು ಬಾರಿ ಭೇಟಿಯಾಗಿ ಚರ್ಚಿಸಿದ್ದೇನೆ ಎಂದರು.

ಜಿಲ್ಲಾ ಬಿಜೆಪಿ ವಿರೋಧ:  ಕಾಂಗ್ರೆಸ್‌ ಮುಖಂಡ ಎ.ಮಂಜು ಅವರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿರುವ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಯಿಂದಲೇ ಮಂಜು ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.  ಕಾಂಗ್ರೆಸ್‌ನಲ್ಲಿ ಎ.ಮಂಜು ಹಳಸಿದ ಅನ್ನದಂತಿದ್ದಾರೆ. ಅದನ್ನು ಉಣ್ಣಲು ಸಾಧ್ಯವೇ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಯೋಗರಮೇಶ್‌ ಅವರು ಪ್ರಶ್ನಿಸುವ ಮೂಲಕ ಮಂಜು  ಸೇರ್ಪಡೆಯನ್ನು ಕಟುವಾಗಿ ವಿರೋಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next