Advertisement

Today ಕೇರಳದಲ್ಲಿ ವಿಪಕ್ಷ ಆಡಳಿತದ ರಾಜ್ಯಗಳ ಸಭೆ; ಕೇಂದ್ರದ ತಾರತಮ್ಯ ಚರ್ಚೆ ?

11:25 PM Sep 11, 2024 | Team Udayavani |

ತಿರುವನಂತರಪುರ: ರಾಜ್ಯ ಸರಕಾರಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಕೇರಳ ರಾಜಧಾನಿ ತಿರುವನಂತಪುರದಲ್ಲಿ ಗುರುವಾರ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ 16ನೇ ಹಣಕಾಸು ಆಯೋಗಕ್ಕೆ ತಿಳಿಸಬೇಕಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Advertisement

ದಕ್ಷಿಣದ 4 ರಾಜ್ಯಗಳು ಹಾಗೂ ಪಂಜಾಬ್‌ ಸಹಿತ ಒಟ್ಟು 5 ರಾಜ್ಯಗಳು ಈ ಸಭೆಯಲ್ಲಿ ಭಾಗಿಯಾಗಲಿವೆ. ಕರ್ನಾಟಕದಿಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಪಾಲ್ಗೊಳ್ಳಲಿದ್ದಾರೆ.

ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಹಂಚಿಕೆ ಮತ್ತು ಹವಾ ಮಾನ ಬದಲಾವಣೆಯಿಂದ ಉಂಟಾ ಗುವ ಪ್ರಾಕೃತಿಕ ವಿಕೋಪಗಳು ಹಾಗೂ ಮನುಷ್ಯ-ಪ್ರಾಣಿ ಸಂಘರ್ಷದ ವಿಷಯ ಗಳನ್ನು ಇಲ್ಲಿ ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯ ಗಳನ್ನು ತಾರತಮ್ಯ ಭಾವನೆಯಿಂದ ನಡೆಸಿಕೊಳ್ಳಲಾಗುತ್ತದೆ ಎಂಬ ಆರೋಪದ ಕುರಿತಾಗಿ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿಪಕ್ಷ ರಾಜ್ಯಗಳಿಂದ ಕೇರಳದಲ್ಲಿ ಸಭೆ ನಡೆಯುವ ಸಾಧ್ಯತೆಯ ಬಗ್ಗೆ ಉದಯವಾಣಿ ಸೆ. 7ರಂದೇ ವರದಿ ಮಾಡಿತ್ತು.

Advertisement

 

 

Advertisement

Udayavani is now on Telegram. Click here to join our channel and stay updated with the latest news.

Next