Advertisement

Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ

02:37 PM Oct 14, 2024 | Team Udayavani |

ಬೆಂಗಳೂರು: ಕಿಡಿಗೇಡಿಯೊಬ್ಬ ನಾಯಿ ಹಾಗೂ ನಾಯಿಯ ಮರಿಗಳ ಮೇಲೆ ಕಾರು ಚಲಾಯಿಸಿ ವಿಕೃತಿ ಮೆರೆದ ಪ್ರಕರಣ ಬೆಳ್ಳಂದೂರಿನ ಅಪಾರ್ಟ್‌ಮೆಂಟ್‌ವೊಂದರ ಸಮೀಪದಲ್ಲಿ ನಡೆದಿದೆ.

Advertisement

ಬೆಳ್ಳಂದೂರಿನ ಅಪಾರ್ಟ್‌ಮೆಂಟ್‌ ಸಮೀಪದ ರಸ್ತೆ ಮೇಲೆ ನಾಯಿ ಮತ್ತು ತನ್ನ ಮರಿಗಳಿರುತ್ತವೆ. ಈ ವೇಳೆ ಕಾರು ಚಾಲಕ ಕಾರನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತಾನೆ. ಬಳಿಕ ಎಡಗಡೆಯ ರಸ್ತೆಯಲ್ಲಿ ಸಂಚರಿಸುವ ವೇಳೆ ಶ್ವಾನದ ಮರಿಗಳ ಮೇಲೆ ಕಾರು ಹರಿಸುತ್ತಾನೆ. ಕಾರು ಚಾಲಕನ ವಿಕೃ ತಿಯು ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಕಂಡ ಸ್ಥಳೀಯರು ಹಾಗೂ ಸಾರ್ವಜನಿಕರು ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಪೊಲೀಸರಿಗೆ ಟ್ಯಾಗ್‌ ಮಾಡಿದ್ದಾರೆ. ಕಾರು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಒಡಿಶಾ ಮೂಲದ ಕಾರು ಚಾಲಕನಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next