Advertisement

ಧೈರ್ಯ ತುಂಬಿದ ಪುರಸಭೆ

04:47 PM Mar 18, 2020 | Suhan S |

ಮಾಗಡಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪಟ್ಟಣದ ಹೊಸ ಮಸೀದಿ ಮತ್ತು ಹಳೇ ಮಸೀದಿ ವಾರ್ಡ್‌ಗಳ ವ್ಯಾಪ್ತಿಯಲ್ಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಆತ್ಮ ಸ್ಥೈರ್ಯ ತುಂಬಲಾಗುತ್ತಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಎಂ.ಎನ್‌.ಮಹೇಶ್‌ ತಿಳಿಸಿದರು.

Advertisement

ಪಟ್ಟಣದ ವಿವಿಧ ವಾರ್ಡ್‌ಗಳಿಗೆ ತಮ್ಮ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ, ಕೊರೊನಾ ಹಿನ್ನಲೆಯಲ್ಲೆ ರಜೆ ಘೋಷಿಸಿರುವುದರಿಂದ ಮಕ್ಕಳು ಆತಂಕದಲ್ಲಿದ್ದಾರೆ. ಜೊತೆಗೆ ಅಗತ್ಯ ಶಿಕ್ಷಕರನ್ನು ನಿಯೋಜಿಸಿ ಅವರಿಗೆ ಪೂರ್ವ ಪರೀಕ್ಷಾ ತಯಾರಿ ಕುರಿತು ಮಾಹಿತಿ ಒದಗಿಸಲಾಗುತ್ತಿದೆ. ಪುರಸಭೆ ವತಿಯಿಂದ ಎಲ್ಲಾ ಮಕ್ಕಳಿಗೂ ಅಗತ್ಯ ಮಾಹಿತಿ ನೀಡುವುದು, ಅವರಲ್ಲಿ ಪರೀಕ್ಷೆ ಎದುರಿಸುವ ಆತ್ಮಸೆôರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪುರಸಭೆ ಕಂದಾಯ ಅಧಿಕಾರಿ ರವಿಕುಮಾರ್‌, ಕೃಷ್ಣಮೂರ್ತಿ, ಇನಾಯತ್‌ವುಲ್ಲಾ, ಶಿಕ್ಷಕರಾದ ಸವಿತಾ, ನಿರ್ಮಲಾ, ಶಬೀರ್‌ ಅಹಮದ್‌, ಸಹೀನಾ ಶಬರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next