Advertisement

ಕಾಂಗ್ರೆಸ್ ನ ಯಾರು ಬ್ರಿಟಷರ ಗುಂಡಿಗೆ ಎದೆಯೊಡ್ಡಿದ್ದರು ಎಂದು ತನಿಖೆಯಾಗಬೇಕು: ನಾರಾಯಣಸ್ವಾಮಿ

04:22 PM Aug 19, 2021 | Team Udayavani |

ಹಾವೇರಿ: ಕಾಂಗ್ರೆಸ್ ನವರೇ ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದರೆಂದು ಮೊನ್ನೆಯಿಂದ ಪದೇ ಪದೇ ಹೇಳುತ್ತಿದ್ದಾರೆ. ಯಾರು ಬ್ರಿಟಷರ ಗುಂಡಿಗೆ ಎದೆಯೊಡ್ಡಿದ್ದರು ಎಂದು ಈ ದೇಶದಲ್ಲಿ ತನಿಖೆ ಆಗಬೇಕಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಕಾಂಗ್ರೆಸ್ ನಿಂದ ದೇಶಕ್ಕೆ ಸ್ವಾತಂತ್ರ್ಯ ಬಂತು ಎನ್ನುತ್ತಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಜಾತಿಗೂ ಮೀರಿ ಒಗ್ಗಟ್ಟಿನಿಂದ ಹೋರಾಟ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಟಾಂಗ್ ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್‌ನವರು ತಾಲಿಬಾನ್ ರನ್ನು ಓಲೈಸುವವರು: ಛಲವಾದಿ ನಾರಾಯಣ ಸ್ವಾಮಿ

ದಾವಣಗೆರೆ: ತಾಲೂಕಿನ ವಡ್ಡಿನಹಳ್ಳಿ ಬಳಿ ಇನ್ನು 2-3 ತಿಂಗಳಲ್ಲಿ ದಿವ್ಯಾಂಗ ವ್ಯಕ್ತಿಗಳ ಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರ(ಸಿಆರ್‌ಸಿ)ದ ಗುದ್ದಲಿ ಪೂಜೆ ನೆರವೇರಿಸ ಲಾಗುವುದು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಗುರುವಾರ ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿರುವ ಸಿಆರ್‌ಸಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಸಂಸದ ಸಿದ್ದೇಶ್ವರ್ ಅವರ ಸತತ ಹೋರಾಟದ ಫಲವಾಗಿ ದಾವಣಗೆರೆಯಲ್ಲಿ ಸಿಆರ್‌ಸಿ ಕೇಂದ್ರ ಪ್ರಾರಂಭವಾಗಿದೆ. ರಾಜ್ಯ ಸರ್ಕಾರದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next