Advertisement

ಡಿಕೆಶಿ ಅಧ್ಯಕ್ಷರಾದ ಮೇಲೆ ಹೊಸ ಹುರುಪು

06:23 AM Jun 29, 2020 | Lakshmi GovindaRaj |

ಮೈಸೂರು: ಡಿ.ಕೆ.ಶಿವಕುಮಾರ್‌ ಅಧಿಕಾರ ವಹಿಸಿ ಕೊಂಡ ಮೇಲೆ ಪಕ್ಷಕ್ಕೆ ಮತ್ತಷ್ಟು ಚೈತನ್ಯ ಬರುವ ಜೊತೆಗೆ ಕಾರ್ಯಕರ್ತರಲ್ಲಿ ಮತ್ತಷ್ಟು ಹುರುಪು ಬರಲಿದೆ ಎಂದು ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌ ಹೇಳಿದರು. ನಗರದ  ಕಾಂಗ್ರೆಸ್‌ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಹಿನ್ನೆಲೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದರು.

Advertisement

ಇಂದು ಈ ರಾಜ್ಯ ದೇಶವನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಸರ್ಕಾರದ  ಧೋರಣೆ, ತಪ್ಪು ನಿರ್ಧಾರಗಳನ್ನು ವಿರೋಧಪಕ್ಷವಾಗಿ ನಾವು ಖಂಡಿಸ ಬೇಕಿದೆ ಎಂದರು. ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದು ಪಡಿ ತಂದು ಉಳ್ಳವರಿಗೆ ಭೂಮಿ ನೀಡಲು ಹೊರಟಿದೆ. ಇದು ರೈತರಿಗೆ ದ್ರೋಹ ಬಗೆದು ಉಳ್ಳವರು  ಆಸ್ತಿ ಕಬಳಿಸುವ ತಂತ್ರವಾಗಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಸಿ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ 19 ಪರಿಹರಿಸುವಲ್ಲಿ ಸಂಪೂರ್ಣವಾಗಿ ವಿಫ‌ಲ ವಾಗಿದ್ದು ಇವೆಲ್ಲವನ್ನೂ ನಮ್ಮ  ಕಾರ್ಯಕರ್ತರು ಜನತೆಗೆ ತಿಳಿಸಬೇಕು ಎಂದು ಹೇಳಿದರು. ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಪದ ಗ್ರಹಣ ಕಾರ್ಯಕ್ರಮ ಪ್ರತಿ ಗ್ರಾಮ, ವಾರ್ಡ್‌ಗಳಲ್ಲಿ ಎಲ್ಲರೂ ನೋಡುವ ವ್ಯವಸ್ಥೆ ಮಾಡಲಾಗುವುದು. ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೈಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆತ್ಮಾನಂದ, ಕಾಂಗ್ರೆಸ್‌ ಕೆ.ಆರ್‌.ಕ್ಷೇತ್ರದ ಉಸ್ತುವಾರಿ ಚಂದ್ರಶೇಖರ್‌, ರಾಘವೇಂದ್ರ, ನಗರಾಧ್ಯಕ್ಷ ಆರ್‌.ಮೂರ್ತಿ, ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಚಂದ್ರಶೇಖರ್‌, ಪುಷ್ಪಲತಾ, ವೀಣಾ, ರವಿ ಶಂಕರ್‌, ಶ್ರೀನಾಥ್‌ ಬಾಬು, ಸುಜಾತ ರಾವ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next