Advertisement

ಕುಡಿಯುವ ನೀರಿಗೆ ಶಾಶ್ವತ ಪರಿಹಾರ : ಭರವಸೆ

10:43 PM May 17, 2020 | Team Udayavani |

ಕುಂದಾಪುರ: ತಲ್ಲೂರಿನ ರಾಜಾಡಿಯಲ್ಲಿ 4.40 ಕೋ.ರೂ. ವೆಚ್ಚದಲ್ಲಿ ಮಂಜೂರಾದ ನದಿ ದಂಡೆ ಸಂರಕ್ಷಣೆಯ ಕಾಮಗಾರಿಯನ್ನು ರವಿವಾರ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಪರಿಶೀಲನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಇಲ್ಲಿಗೆ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ವೆಂಟೆಡ್‌ ಡ್ಯಾಂ ಪಕ್ಕದಲ್ಲಿ ಜಾಕ್‌ವೆಲ್‌ ನಿರ್ಮಾಣ ಮಾಡಿ, ಅದರಿಂದ ಈ ಭಾಗದ ಸುತ್ತಮುತ್ತಲಿನ ಎಲ್ಲ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರು ಒದಗಿಸುವ ಬಗ್ಗೆ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯನ್ನು ಜೋಡಣೆ ಮಾಡಲು ಅನುದಾನಕ್ಕೆ ಮನವಿ ಮಾಡಿದ್ದು, ಇದಕ್ಕೆ ಅನುದಾನ ಮಂಜೂರಿಗೆ ಪ್ರಯತ್ನಿಸುವುದಾಗಿ ಹೇಳಿದರು.

ಹಿರಿಯ ವಕೀಲ ಟಿ.ಬಿ. ಶೆಟ್ಟಿ, ಮುಖಂಡರಾದ ಸಂತೋಷ್‌ ಮೊಗವೀರ, ಸಂಜೀವ ದೇವಾಡಿಗ, ಚಂದ್ರಯ್ಯ ಆಚಾರ್ಯ, ಸ್ಥಳೀಯರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next