Advertisement

Kundapura: ವ್ಯಕ್ತಿ ಆತ್ಮಹತ್ಯೆ

08:05 PM Aug 07, 2024 | Team Udayavani |

ಕುಂದಾಪುರ: ಬಹಳ ಸಮಯದಿಂದ ತೀವ್ರ ಅನಾರೊಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ (ಆ. 6) ರಾತ್ರಿ ಸಂಭವಿಸಿದೆ.

Advertisement

ಕಂದಾವರ ಗ್ರಾಮದ ಮೂಡ್ಲಕಟ್ಟೆಯ ನಿವಾಸಿಯಾದ ಅಣ್ಣಪ್ಪ (30) ಅವರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಅಣ್ಣಪ್ಪ ಅವರು ಸುಮಾರು 3 ತಿಂಗಳ ಹಿಂದೆ ಉಡುಪಿ ಜಿಲ್ಲಾಸ್ಪತ್ರೆ, ಮಣಿಪಾಲ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ, ಗುಣಮುಖರಾಗಿರಲಿಲ್ಲ. ಈ ಕಾರಣಕ್ಕೆ ಬೇಸರಗೊಂಡು ಮೂಡ್ಲಕಟ್ಟೆ ರೈಲು ನಿಲ್ದಾಣ ಬಳಿಯ ರುದ್ರುಮನೆ ಎಂಬಲ್ಲಿನ ಹಂಚಿನ ಮನೆಯೊಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಪತ್ನಿ ರೇಖಾ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next