Advertisement

9ನೇ ತರಗತಿ ಬಾಲಕ ಚಲಾಯಿಸುತ್ತಿದ್ದ ಬೈಕ್‌ ಢಿಕ್ಕಿಯಾಗಿ ವ್ಯಕ್ತಿ ಸಾವು

11:00 PM Feb 14, 2024 | Team Udayavani |

ಕುಂಬಳೆ: ಕುಂಬಳೆ ಪೇಟೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್‌ ಢಿಕ್ಕಿ ಹೊಡೆದು ಪಾದಚಾರಿ ಸಾವಿಗೀಡಾಗಿದ್ದಾರೆ.

Advertisement

ಬುಧವಾರ ಸಂಜೆ ಕುಂಬಳೆ ಬಸ್‌ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ಅಂಗಡಿಮೊಗರು ಪೆರ್ಲಾಡ ನಿವಾಸಿ ಮೈಕ್‌ ಆಪರೇಟರ್‌ ಅಬ್ದುಲ್ಲ ಕುಂಞಿ (60) ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್‌ ಬಡಿಯಿತು.ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ತತ್‌ಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಬೈಕಿನಲ್ಲಿ ಈರ್ವರು ಆಪ್ರಾಪ್ತ ವಯಸ್ಕ ವಿದ್ಯಾರ್ಥಿಗಳಿದ್ದು ಬೈಕ್‌ ಚಾಲಕನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಪೋಸ್ಟ್‌ಮಾರ್ಟಂಗೆ ಒಯ್ಯಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next