Advertisement

ಪಶ್ಚಿಮ ಪದವೀಧರ ಕ್ಷೇತ್ರ: ಅಪಘಾತವಾಗಿದ್ದರೂ, ಆ್ಯಂಬುಲೆನ್ಸ್ ನಲ್ಲಿ ಬಂದು ಮತಹಾಕಿದ ವ್ಯಕ್ತಿ

12:21 PM Oct 28, 2020 | Mithun PG |

ಗದಗ: ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಒಳರೋಗಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರು ನೋವನ್ನೂ ಲೆಕ್ಕಿಸದೇ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಚಲಾಯಿಸುವ ಮೂಲಕ ಗಮನ ಸೆಳೆದರು.

Advertisement

ಇಲ್ಲಿನ ಪುಟ್ಟರಾಜ ನಗರ ನಿವಾಸಿ ಮರ್ದಾನ್ ಅಲಿ ದೊಡ್ಡಮನಿ ಅಂಬುಲೆನ್ಸ್ ನಲ್ಲೆ ಮತಗಟ್ಟೆ ಸಂಖ್ಯೆ 59ಕ್ಕೆ ಆಗಮಿಸಿ ಮತ ಚಲಾಯಿಸಿದವರು.

ನಾಲ್ಕು ದಿನಗಳ ಹಿಂದೆ ಅಪಘಾತಕ್ಕೀಡಾಗಿದ್ದ ಮರ್ದಾನ್ ಅಲಿ ಕಾಲು‌ ಮುರಿದಿದ್ದರಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ಮಾಡಬೇಕು ಎಂದು ವೈದ್ಯರ ಬಳಿ ಮನವಿ ಮಾಡಿದ್ದರು.

ಇದನ್ನೂ ಓದಿ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚುನಾವಣೆ ಮುಂದೂಡುವುದು ಒಳಿತು :ಸಚಿವ ಸುಧಾಕರ್

Advertisement

ಇದನ್ನೂ ಓದಿ:  ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ತಂದು, ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದ ಪ್ರಯಾಣಿಕ

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ, ಅನಿಲ್ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ ಮತ್ತಿತರರು ಇದ್ದರು.

ಇದನ್ನೂ ಓದಿ:  ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !

 

Advertisement

Udayavani is now on Telegram. Click here to join our channel and stay updated with the latest news.

Next