Advertisement

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್

09:42 AM Sep 29, 2019 | sudhir |

ಚಿತ್ರದುರ್ಗ: ವಿದ್ಯುತ್ ಕಂಬಕ್ಕೆ ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಆಡನೂರು ಬಳಿ ನಡೆದಿದೆ.

Advertisement

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಆಡನೂರು ಬಳಿ ರಸ್ತೆ ಬದಿಯಲ್ಲಿದ್ದ ಟ್ರಾನ್ಸಫಾರ್ಮರ್ ಗೆ ಚಾಲಕನ ನಿಯಂತ್ರಣ ತಪ್ಪಿದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಡಿಕ್ಕಿ ಹೊಡೆದು ಪಲ್ಟಿ ಬಿದ್ದಿದೆ .

ಹಾಸನದಿಂದ ದಾವಣಗೆರೆಗೆ ಹೊರಟಿದ್ದ ಪೆಟ್ರೋಲ್ ಟ್ಯಾಂಕರ್ ರಾತ್ರಿ ಸುಮಾರು 9.30 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದ ತೋಟಗಳಿಗೂ ತಗುಲಿತ್ತು. ಇದೇ ವೇಳೆಗೆ ಮಳೆಯೂ ಆರಂಭವಾದ್ದರಿಂದ ಭಾರೀ‌ ಅನಾಹುತ ತಪ್ಪಿದಂತಾಗಿದೆ.

ಟ್ಯಾಂಕರ್ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಸಿನಿಮಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹೊಳಲ್ಕೆರೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.

Advertisement

ಹೊಳಲ್ಕೆರೆ ತಾಲೂಕು ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next