Advertisement

Election: ತ.ನಾಡಿಗೆ ತೆರಳಿದ್ದ ಪೊಲೀಸ್‌ ಅಧಿಕಾರಿ,ಸಿಬ್ಬಂದಿ ಅಪಘಾತದಲ್ಲಿ ಸಾವು

11:44 AM Apr 12, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್‌ಸ್ಟೇಬಲ್‌ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Advertisement

ಘಟನೆಯಲ್ಲಿ ಮತ್ತೂಬ್ಬ ಹಿರಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಕರ್ನಾಟಕ ಮೀಸಲು ಪಡೆಯ ಕೋರ ಮಂಗಲದಲ್ಲಿರುವ 3ನೇ ಬೆಟಾಲಿಯನ್‌ನ 3ನೇ ಸಹಾಯಕ ಕಮಾಂಡೆಂಟ್‌ ಟಿ.ಪ್ರಭಾಕರ್‌ ಮತ್ತು ವಿಜಯಪುರದ ಐಆರ್‌ಬಿ(ಇಂಡಿಯನ್‌ ರಿಸರ್ವ ಬೆಟಾಲಿಯನ್‌)ನ ಕಾನ್‌ ಸ್ಟೇಬಲ್‌ ವಿಠಲ್‌ ಗಡಾಧರ್‌ ಎಂಬವರು ಮೃತಪಟ್ಟಿದ್ದಾರೆ. ಜತೆಗೆ ವಿಜಯಪುರದ ಐಆರ್‌ಬಿ ಡೆಪ್ಯೂಟಿ ಕಮಾಂಡೆಂಟ್‌ ಯು.ಎನ್‌.ಹೇಮಂತ್‌ ಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದೇ ವೇಳೆ ತಮಿಳುನಾಡಿನ ಮೀಸಲು ಪಡೆಯ ಕಾನ್‌ಸ್ಟೆàಬಲ್‌ ದಿನೇಶ್‌ ಎಂಬವರು ಮೃತಪಟ್ಟಿದ್ದಾರೆ.

ಪೊಲೀಸ್‌ ಕಾನ್‌ ಸ್ಟೇಬಲ್‌ ಜಯಕುಮಾರ್‌ ಗಂಭೀರ ಗಾಯಗೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಎಸ್‌ಆರ್‌ಪಿ ಅಧಿಕಾರಿಗಳು ಮಾಹಿತಿ ನೀಡಿದರು. 10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿಯ 8 ತುಕಡಿಗಳನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್‌ಕುಮಾರ್‌ ಮುಂದಾಳತ್ವ ವಹಿಸಿದ್ದರು. ಧರ್ಮುಪುರಿ ತಂಡಕ್ಕೆ ಪ್ರಭಾಕರ್‌ ಮುಖ್ಯಸ್ಥರಾಗಿದ್ದರು.ಗುರುವಾರ ಸಂಜೆ 5.30ರಲ್ಲಿ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್‌ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಪ್ರಭಾಕರ್‌ ಜೀಪ್‌ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ವಿಠಲ್‌, ಹೇಮಂತ್‌ ಹಾಗೂ ತಮಿಳುನಾಡಿನ ಸಿಬ್ಬಂದಿ ಕುಳಿತಿದ್ದರು. ಮಾರ್ಗ ಮಧ್ಯೆ ಅತಿವೇಗವಾಗಿ ಬಂದ ತಮಿಳುನಾಡಿನ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್‌, ವಿಠಲ್‌, ತಮಿಳುನಾಡಿನ ದಿನೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next