Advertisement
ಅನ್ಯ ಧರ್ಮೀಯ ಖೈದಿಗಳು ಹಲ್ಲೆ ನಡೆಸಿದ್ದಾಗಿ ಖೈದಿಯೊಬ್ಬ ಜೈಲಿನಿಂದಲೇ ವಿಡಿಯೋ ಮಾಡಿ ಪ್ರಧಾನಿ ಮೋದಿ ಅವರಿಗೆ ರಕಣೆಗೆ ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ಮಹಾರಾಷ್ಟ್ರ ಮೂಲದ ಪರಮೇಶ್ವರ 3 ನಿಮಿಷ 5 ಸೆಕೆಂಡ್ಗಳ ವಿಡಿಯೋ ಮಾಡಿ ರಕ್ಷಣೆಗೆ ಮೊರೆ ಇಟ್ಟಿದ್ದಾನೆ.
Related Articles
Advertisement
ನಮ್ಮ ಮೇಲೆ ಹಲ್ಲೆ ನಡೆಯುತ್ತಿದ್ದರೂ ಜೈಲು ಅಧಿಕಾರಿಗಳು, ಸಿಬ್ಬಂದಿ ನಮ್ಮ ರಕ್ಷಣೆಗೆ ಧಾವಿಸಲಿಲ್ಲ. ಬದಲಾಗಿ ನಮ್ಮನ್ನೇ ಜೈಲು ಆವರಣಕ್ಕೂ ಬಿಡದೇ ಸೆಲ್ ನಲ್ಲಿ ಕೂಡಿಹಾಕಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ, ಯೋಗಿ ತಮ್ಮ ನೆರವಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.
ಸದರಿ ಬೆಳವಣಿಗೆ ಹಾಗೂ ವಿಡಿಯೋ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಐ.ಜಿ.ಮ್ಯಾಗೇರಿ, ರಾಮ, ಮಂದಿರ ಅಂತೆಲ್ಲ ಸಲ್ಲದ ವಿಷಯಗಳನ್ನು ಮುಂದಿಟ್ಟುಕೊಂಡು ಆರೋಪಿ ಸುಳ್ಳು ಹೇಳುತ್ತಿದ್ದಾನೆ. ಮಹಾರಾಷ್ಟ್ರ ಮೂಲದ ಸದರಿ ಖೈದಿ, ಅಲ್ಲಿನ ಜೈಲುಗಳಲ್ಲಿಯೂ ಇದೇ ರೀತಿ ವರ್ತಿಸಿದ ಕಾರಣಕ್ಕೆ ಆತನನ್ನು ನಮ್ಮ ಜೈಲಿಗೆ ವರ್ಗಾಯಿಸಿದ್ದಾಗಿ ವಿವರಿಸಿದ್ದಾರೆ.
ಜ.23 ರಂದು ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಆರೋಪಿತರು ಇತರರೊಂದಿಗೆ ಜಗಳ ಮಾಡಿದ್ದರು. ಇದರಿಂದಾಗಿ ಜೈಲಿನಲ್ಲಿ ಗಲಾಟೆ ನಿಯಂತ್ರಿಸಲು ಆರೋಪಿಯನ್ನು ಪ್ರತ್ಯೇಕ ಸೆಲ್ನಲ್ಲಿ ಇರಿಸಿದ್ದೇವೆ ಎಂದರು.
ಜೈಲಿನಿಲ್ಲಿ ಮೊಬೈಲ್ ನಿಷೇಧವಿದ್ದರೂ ಆರೋಪಿ ಮೊಬೈಲ್ನಲ್ಲಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಆರೋಪಿಗೆ ಮೊಬೈಲ್ ಹೇಗೆ ಲಭ್ಯವಾಯ್ತು, ಜೈಲಿನ ಒಳಗೆ ಮೊಬೈಲ್ ಪ್ರವೇಶಿಸಿದ್ದು ಹೇಗೆ ಎಂಬೆಲ್ಲ ವಿಷಯಗಳ ಕುರಿತು ತನಿಖೆ ಮಾಡಲಾಗುತ್ತದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.