Advertisement

B. S. Yediyurappa ಕುತಂತ್ರಿಗಳಿಗೆ ಜನರಿಂದ ತಕ್ಕ ಪಾಠ

12:56 AM Jun 16, 2024 | Team Udayavani |

ಬೆಂಗಳೂರು: ತನ್ನ ವಿರುದ್ಧದ ಪೋಕೊÕà ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಹೇಳಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಯಾರ್ಯಾರು ಈ ರೀತಿ ಕುತಂತ್ರ ಮಾಡುತ್ತಿದ್ದಾರೋ ಅವರೆಲ್ಲರಿಗೂ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.

Advertisement

ಶನಿವಾರ ದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಿಲ್ಲಿಗೆ ತೆರಳಿದ್ದೆ. ಈಗಷ್ಟೇ ಬೆಂಗಳೂರಿಗೆ ಬಂದಿದ್ದೇನೆ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದರು.

ಜೂ.17ರಂದು ವಿಚಾರಣೆಗೆ ಬರುವುದಾಗಿ ಮೊದಲೇ ಲಿಖಿತ ರೂಪದಲ್ಲಿ ತಿಳಿಸಿದ್ದೆ. ಹೈಕೋರ್ಟ್‌ ಕೂಡ ಇದಕ್ಕೆ ಸಮ್ಮತಿ ಸೂಚಿಸಿದೆ ಅಲ್ಲದೆ, ಜಾಮೀನುರಹಿತ ಬಂಧನ ವಾರಂಟ್‌ಗೆ ತಡೆಯಾಜ್ಞೆ ನೀಡಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next