Advertisement

Kundapura; ಚಿನ್ನಾಭರಣವಿದ್ದ ಪರ್ಸ್‌ ಕಳವು

11:47 PM Jan 15, 2024 | Team Udayavani |

ಕುಂದಾಪುರ: ದೇವಸ್ಥಾನಕ್ಕೆ ಹೋಗಿ ಬಂದಾಗ ವ್ಯಾನಿಟಿ ಬ್ಯಾಗಿನಲ್ಲಿದ್ದ ಚಿನ್ನ ಕಳವಾದ ಕುರಿತು ಪ್ರಕರಣ ದಾಖಲಾಗಿದೆ.

Advertisement

ಭಟ್ಕಳದ ಲೋಕೇಶ್‌ ದೂರು ನೀಡಿದ್ದು, ಅವರ ಮಾವ ನಾರಾಯಣ ಅವರು ಲೋಕೇಶ್‌ ಅವರ ಮದುವೆಯ ಪ್ರಯುಕ್ತ 51.9 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿ ಮಾಡಿದ್ದು, ಚಿನ್ನಾಭರಣಗಳನ್ನು ಪರ್ಸಿನಲ್ಲಿ ತುಂಬಿಸಿ ಪತ್ನಿಯ ವ್ಯಾನಿಟಿ ಬ್ಯಾಗಿನಲ್ಲಿಟ್ಟು ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿದ್ದರು.

ದೇವಸ್ಥಾನದ ಹೊರಗೆ ಬಂದು ನೋಡಿದಾಗ ವ್ಯಾನಿಟಿ ಬ್ಯಾಗ್‌ ಜಿಪ್‌ ತೆರೆದಿದ್ದು, ಬ್ಯಾಗಿನಲ್ಲಿದ್ದ ಚಿನ್ನ ಇಟ್ಟಿದ್ದ ಪರ್ಸ್‌ ಕಳವಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next