Advertisement

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

08:17 AM Apr 25, 2024 | Team Udayavani |

ಮಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿವೃತ್ತ ಯೋಧರೊಬ್ಬರು ಮನೆಗೆ ಬಂದು ಮತದಾನದ ಕರ್ತವ್ಯ ಮುಗಿಸಿ ಮರಳಿ ಆಸ್ಪತ್ರೆಗೆ ದಾಖಲಾಗಿ ಕೆಲವು ದಿನಗಳ ಅನಂತರ ಮೃತಪಟ್ಟಿದ್ದಾರೆ.

Advertisement

ಬಂಟ್ವಾಳ ವಗ್ಗ ನಿವಾಸಿ ಮಾಧವ ಪ್ರಭು (85) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಅವರು ವೈದ್ಯರ ಅನುಮತಿ ಪಡೆದು ಮನೆಗೆ ತೆರಳಿ ಎ. 15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಹಿಂದಿರುಗಿದ್ದರು. ಎ. 24ರಂದು ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮಾಧವ ಪ್ರಭು ಅವರು ಸೈನ್ಯಕ್ಕೆ ಸೇರ್ಪಡೆಯಾಗುವ ಪೂರ್ವದಲ್ಲಿ ಮಲೇರಿಯಾ ನಿರ್ಮೂಲನ ವಿಭಾಗದ ಇನ್‌ಸ್ಪೆಕ್ಟರ್‌ ಆಗಿದ್ದರು. ಸೇನೆಯಿಂದ ನಿವೃತ್ತರಾದ ಬಳಿಕ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next