ಕಾಪು: ಟಯರ್ ಪಂಕ್ಚರ್ ಆಗಿ ಕೆಟ್ಟು ನಿಂತಿದ್ದ ಟೆಂಪೋಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡ ಘಟನೆ ಕಟಪಾಡಿ ಫಾರೆಸ್ಟ್ ಗೇಟ್ ಬಳಿ ಜೂ. 16ರಂದು ನಡೆದಿದೆ.
ರಾ. ಹೆ. 66ರ ಕಟಪಾಡಿ ಫಾರೆಸ್ಟ್ ಗೇಟ್ ಬಬ್ಬುಸ್ವಾಮಿ ದೈವಸ್ಥಾನದ ಮುಂಭಾಗದಲ್ಲಿ ಯಾವುದೇ ಸೂಚನಾ ಫಲಕ ಹಾಗೂ ಮುಂಜಾಗೃತ ಕ್ರಮ ಅನುಸರಿಸದೇ ರಸ್ತೆಯಲ್ಲಿ ಟಯರ್ ಪಂಕ್ಚರ್ ಆಗಿದ್ದ ಟೆಂಪೋವನ್ನು ನಿಲ್ಲಿಸಿದ್ದು, ಅದೇ ದಾರಿಯಲ್ಲಿ ಬಂದ ಸ್ಕೂಟರ್ ಸವಾರ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ಹರಿಶ್ಚಂದ್ರ ಹಾಗೂ ಸಹ ಸವಾರಿಣಿ ರತ್ನ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದು ತೀವ್ರ ಗಾಯಗೊಂಡಿದ್ದರು. ಅಪಘಾತದಿಂದ ಸ್ಕೂಟರ್ ಕೂಡ ಜಖಂಗೊಂಡಿದೆ.
ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.