Advertisement

ಕಾರು ಢಿಕ್ಕಿಯಾಗಿ ಸ್ಕೂಟರ್‌ ಸವಾರ ಗಂಭೀರ; ಪರಾರಿಯಾಗಲೆತ್ನಿಸಿದ ಕಾರು ಚಾಲಕ ಪೊಲೀಸರ ವಶ

01:01 AM Dec 25, 2022 | Team Udayavani |

ಉಳ್ಳಾಲ: ಸ್ಕೂಟರ್‌ಗೆ ಢಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ತಲಪಾಡಿ ದೇವಿಪುರದಲ್ಲಿ ನಡೆದಿದೆ.

Advertisement

ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್‌ ಎ.ಕೆ. ಮುಬಾರಿಷ್‌ನನ್ನು ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಬಾರಿಷ್‌ ಶುಕ್ರವಾರ ಸಂಜೆ ಕಾರಿನಲ್ಲಿ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ವೇಳೆ ಕೋಟೆಕಾರು ಸಮೀಪ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ವಿದೇಶಿಯರು ಚಲಾಯಿಸುತ್ತಿದ್ದ ಸ್ಕೂಟರ್‌ ರಸ್ತೆಗಪ್ಪಳಿಸಿದ್ದು ಸವಾರ ಸೆಟಿದ್‌ ಬಾಷಾಂಗ್‌ (30) ಗಂಭೀರ ಗಾಯಗೊಂಡು ನಗರದ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಸಹ ಸವಾರ ಅಲಿ ಸಾಗರ್‌ (30) ಅಪಾಯದಿಂದ ಪಾರಾಗಿದ್ದಾರೆ. ಇವರಿಬ್ಬರು ಮಂಗಳೂರು ವಿ.ವಿ.ಯಲ್ಲಿ ವ್ಯಾಸಂಗಕ್ಕೆಂದು ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಮುಬಾರಿಷ್‌ ಕಾರು ಢಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ದೇವಿಪುರದ ಒಳ ರಸ್ತೆ ಮೂಲಕ ಪರಾರಿಯಾಗಿಲು ಯತ್ನಿಸಿದ್ದು ಆತನನ್ನು ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next