Advertisement

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

09:12 PM Apr 20, 2024 | Team Udayavani |

ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿಯೊಬ್ಬರು ತೀವ್ರ ಹೃದಯಾಘಾತದಿಂದ ಶನಿವಾರ ನಿಧನ ಹೊಂದಿದ್ದಾರೆ.

Advertisement

ಮೂಲತ: ದಾವಣಗೆರೆ ಮೂಲದ ಹುಬ್ಬಳ್ಳಿಯ ಹೆಸ್ಕಾಂ (ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ) ಕೇಂದ್ರ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕೃಷ್ಣಮೂರ್ತಿ ಬಿ.ಆರ್. ಮೃತಪಟ್ಟವರು.

74-ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಕರ್ತವ್ಯದಲ್ಲಿದ್ದಾಗ ತೀವ್ರ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.

ಮೃತರು ಸರಕಾರಿ ಕಿತ್ತೂರು ಸರಕಾರಿ ಆಸ್ಪತ್ರೆಯ ದಂತವೈದ್ಯೆ ಡಾ.ನಾಗರತ್ನಾ ಮತ್ತು ಪುತ್ರ ಸ್ವರೂಪ ಅವರನ್ನು ಅಗಲಿದ್ದಾರೆ. ಎಇಇ ಕೃಷ್ಣಮೂರ್ತಿ ಅವರ ನಿಧನಕ್ಕೆ ಚುನಾವಣಾಧಿಕಾರಿ ದಿವ್ಯ ಪ್ರಭು ಹಾಗೂ ಹು-ಧಾ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಪ್ರಿಯಾಂಗ ಎಂ., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ ರೋಷನ್, ಪ್ರಧಾನ ವ್ಯವಸ್ಥಾಪಕ ಸಿದ್ದು ಹುಲ್ಲೋಳಿ ಅವರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next